Missing alert ಶಿವಮೊಗ್ಗ : ಕೆಲಸದ ನಿಮಿತ್ತ ತೆರಳಿದ್ದ ಇಬ್ಬರು ವ್ಯಕ್ತಿಗಳು ಮರಳಿ ಬಾರದೆ ನಾಪತ್ತೆಯಾಗಿರುವ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಬೆಸ್ಟ್ ಸಿಎಂ POST ನಲ್ಲಿ ಅವಹೇಳನ! ಶಿವಮೊಗ್ಗದಲ್ಲಿ ದಾಖಲಾಯ್ತು ಮತ್ತೊಂದು ಕಂಪ್ಲೆಂಟ್! ಏನಿದು
ಸೂಳೆಬೈಲು ನಿವಾಸಿ 38 ವರ್ಷದ ನಜೀರ್ ಅಹಮ್ಮದ್ ಅವರು 2025ರ ಆಗಸ್ಟ್ 21ರಂದು ಕಾರ್ಕಳಕ್ಕೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದು, ಈವರೆಗೂ ವಾಪಸ್ಸಾಗಿಲ್ಲ. ಇವರು 5 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹಾಗೂ ಕೋಲು ಮುಖದ ಚಹರೆ ಹೊಂದಿದ್ದಾರೆ. ಕನ್ನಡ ಮತ್ತು ಉರ್ದು ಭಾಷೆ ಮಾತನಾಡುವ ಇವರು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಪ್ಯಾಂಟ್ ಮತ್ತು ಕಪ್ಪು ಜರ್ಕಿನ್ ಧರಿಸಿದ್ದರು.
ಮತ್ತೊಂದು ಪ್ರಕರಣದಲ್ಲಿ 31 ವರ್ಷದ ರುಸ್ತುಂ ಪಾಷ ಎಂಬುವವರು 2024ರ ಡಿಸೆಂಬರ್ 12ರಂದು ಅಡುಗೆ ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದಾರೆ. 5.5 ಅಡಿ ಎತ್ತರದ ಇವರು ಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಮಾತನಾಡುತ್ತಾರೆ. ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದ ಇವರ ಬಗ್ಗೆ ಅಥವಾ ನಜೀರ್ ಅಹಮ್ಮದ್ ಅವರ ಬಗ್ಗೆ ಯಾವುದೇ ಸುಳಿವು ದೊರೆತರೆ ಸಾರ್ವಜನಿಕರು ದೊಡ್ಡಪೇಟೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08182-2611414 ಅಥವಾ ಮೊಬೈಲ್ ಸಂಖ್ಯೆ 9480803345ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.\
