ನಾಳೆ ನಗರದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ: ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮಾಜಿ ಹೊಸೂರು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga Power Cut on June 12