ತೀರ್ಥಹಳ್ಳಿ : ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಆಗುಂಬೆ ತೀರ್ಥಹಳ್ಳಿ ನಡುವಿನ ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ಭಾನುವಾರ ಸಂಜೆ ಸಂಭವಿಸಿದೆ.
ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಿಡ್ಜ್ ಕಾರು ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಇನೋವಾ ನಡುವೆ ಈ ಅಪಘಾತ ಸಂಭವಿಸಿದೆ.. ಕಾರಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು ಪಟ್ಟಣದ ಜೆಸಿ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರದೊಯ್ಯಲಾಗಿದೆ. ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
