ಭದ್ರಾ ಎಡದಂಡೆ, ಬಲದಂಡೆ ನಾಲೆಗಳಿಗೆ ನೀರು ಬಂದ್! ಕಾರಣ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram
Why is 2000 cusecs water released from Bhadra Reservoir ಭದ್ರಾ ಜಲಾಶಯದಿಂದ ಮೇ 18ರಿಂದ ಕುಡಿಯುವ ನೀರು ಬಿಡುಗಡೆ
Why is 2000 cusecs water released from Bhadra Reservoir ಭದ್ರಾ ಜಲಾಶಯದಿಂದ ಮೇ 18ರಿಂದ ಕುಡಿಯುವ ನೀರು ಬಿಡುಗಡೆ

Bhadra Reservoir Water / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ವಾಡಿಕೆಯಂತೆ ಮಳೆಯಾಗದ ಕಾರಣ ಭದ್ರಾ ಅಣೆಕಟ್ಟಿನಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಎಡದಂಡೆ ಹಾಗೂ ಬಲದಂಡೆ ನಾಲೆಗಳ ಮೂಲಕ ನೀರು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ವಾರ್ತಾಇಲಾಖೆಯ ಮೂಲಕ ಇಂದು ಗುರುವಾರ ಪ್ರಕಟಣೆಯನ್ನು ಹೊರಡಿಸಿದ್ದು, ಪ್ರಕಟಣೆಯಲ್ಲಿ ವಿಷಯದ ಕುರಿತಾಗಿ ವಿವರಿಸಿದ್ದಾರೆ. ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಮೀಸಲಿಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ. ಸರ್ಕಾರದ ಈ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಅಚ್ಚುಕಟ್ಟು ವ್ಯಾಪ್ತಿಯ ರೈತ ಸಮುದಾಯವು ನೀರಾವರಿ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮುಂಬರುವ ದಿನಗಳಲ್ಲಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಭದ್ರಾ ಅಣೆಕಟ್ಟು ಭರ್ತಿಯಾದರೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಆ ಸಂದರ್ಭದಲ್ಲಿ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆದು, ಕೃಷಿ ಬೆಳೆಗಳಿಗೆ ನೀರು ಹರಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor