Shivamogga ಶಿವಮೊಗ್ಗ: ವಸತಿ ಪ್ರದೇಶದಲ್ಲಿ ಮಕ್ಕಳು ಆಟವಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರೊಬ್ಬರು112 ಗೆ ಕರೆ ಮಾಡಿ ದೂರು ನೀಡಿದ ಘಟನೆ ನಡೆದಿದೆ.
ಶಿವಮೊಗ್ಗ : KSRTC ಬಸ್ ನಿಲ್ದಾಣದ ಶೌಚಾಲಯದ ಬಳಿ ವ್ಯಕ್ತಿ ಆತ್ಮ*ಹತ್ಯೆ
ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಪ್ರದೇಶವೊಂದರಲ್ಲಿ ಮಕ್ಕಳು ಆಟವಾಡುತ್ತಿದ್ದರು. ಅದು ಜನಸಂದಣಿ ಹೆಚ್ಚಿರುವ ವಸತಿ ಪ್ರದೇಶವಾಗಿದ್ದರಿಂದ ಸಾರ್ವಜನಿಕರಿಗೆ ಅದರಿಂದ ತೊಂದರೆಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಯೊಬ್ಬರು 112 ಪೊಲೀಸ್ ಸಿಬ್ಬಂದಿಗೆ ದೂರು ನೀಡಿದ್ದರು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಇಆರ್ವಿ ಸಿಬ್ಬಂದಿ, ವಸತಿ ಪ್ರದೇಶದಲ್ಲಿ ಆಟವಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಮಕ್ಕಳಿಗೆ ತಿಳಿಹೇಳಿದ್ದಾರೆ. ಅಲ್ಲದೆ, ಆಟವಾಡಲು ಹತ್ತಿರದ ಮೈದಾನವನ್ನು ಬಳಸಿಕೊಳ್ಳುವಂತೆ ಸೂಕ್ತ ತಿಳುವಳಿಕೆ ನೀಡಿ, ಮಕ್ಕಳನ್ನು ಆ ಸ್ಥಳದಿಂದ ಕಳುಹಿಸಿಕೊಟ್ಟಿದ್ದಾರೆ.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
