ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ತಾಲೂಕಿನ ಬಿದರೆಯಲ್ಲಿರುವ ಇಸ್ಕಾನ್ (shivamogga ISKCON) ದಕ್ಷಿಣ ಶ್ರೀ ಮಾಯಾಪುರ್ ಧಾಮ್ನಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಇಸ್ಕಾನ್ ಕರ್ನಾಟಕ ಪ್ರಾದೇಶಿಕ ಕಾರ್ಯದರ್ಶಿ ಸುಧೀರ್ ಚೈತನ್ಯ ದಾಸ್ ತಿಳಿಸಿದರು. ಈ ಸಂಬಂಧ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ವಿವರವಾದ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಕಾನ್ ಶಾಖೆ ಆರಂಭವಾದಾಗಿನಿಂದ ಪ್ರತಿವರ್ಷವೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜನ್ಮಾಷ್ಟಮಿ ಆಯೋಜಿಸಲಾಗಿದೆ ಎಂದರು.
- ಸೆಪ್ಟೆಂಬರ್ 4ರಂದು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಭಕ್ತರಿಗೆ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೇ ಅವಧಿಯಲ್ಲಿ ಆಗಮಿಸುವ ಭಕ್ತರಿಗೆ ಮಹಾಪ್ರಸಾದ ವಿತರಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
- ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಹರಿನಾಮ ಸಂಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮ, ಮಹಾಭಿಷೇಕ, ಪ್ರವಚನ ಹಾಗೂ ತೊಟ್ಟಿಲೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
- ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗುವಂತೆ ಸುಧೀರ್ ಚೈತನ್ಯ ದಾಸ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರಸದಾಸ್ ಗೋಪಾಲದಾಸ್, ರಸಿಕ ಶೇಖರ ಚೈತನ್ಯದಾಸ್, ವಿಶ್ವಂಭರ ಗೌರಾಂಗದಾಸ್ ಮತ್ತಿತರರು ಉಪಸ್ಥಿತರಿದ್ದರು.
