ಆಕ್ಸಿಡೆಂಟ್ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ (sagara rural police station) ವ್ಯಾಪ್ತಿಯಲ್ಲಿ ಈ ಘಟನೆ ನಿನ್ನೆ ನಡೆದಿದೆ
ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಒಮಿನಿ ವಾಹನವೊಂದು ಅಪ್ಸೆಟ್ ಆಗಿತ್ತು.
ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ ಹೊರಟ ಸಾಗರ ಗ್ರಾಮಾಂತರ ಸ್ಟೇಷನ್ನ ಹೆಚ್ಸಿ ಹುಚ್ಚಪ್ಪ ಎಂ ಬಿ ಮತ್ತು ಚಾಲಕ ಸಂದೀಪ್ ಸ್ಥಳಕ್ಕೆ ಬಂದಿದ್ದಾರೆ.
ಇದನ್ನು ಸಹ ಓದಿ : ಸರ್ಕಾರಿ ಅಧಿಕಾರಿಗಳೇ ಹುಷಾರ್ | ರಹಸ್ಯ ಕ್ಯಾರ್ಯಾಚರಣೆ ಹೆಸರಿನಲ್ಲಿ ಹೆದರಿಸುವವರಿದ್ದಾರೆ?
ಆದರೆ ಘಟನೆಯಲ್ಲಿ ವಾಹನ ಜಖಂಗೊಂಡಿದ್ದರಿಂದ ಗಾಯಗೊಂಡಿದ್ದ ಚಾಲಕ ಪ್ರವೀಣ್ರನ್ನ ಅದರಿಂದ ಹೊರತೆಗೆಯಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ತಕ್ಷಣ 112 ಸಿಬ್ಬಂದಿ ಸಾಗರ ಟೌನ್ಗೆ ವಾಪಸ್ ಆಗಿ ಮೆಕಾನಿಕ್ ಒಬ್ಬರನ್ನ ಕರೆದುಕೊಂಡು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಮೆಕಾನಿಕ್ ರ ಸಹಾಯದೊಂದಿಗೆ ಸುಮಾರು ಮೂರು ಗಂಟೆ ಕಾರ್ಯಾಚರಣೆ ನಡೆಸಿ, ಗಾಯಾಳುವನ್ನು ವಾಹನದಿಂದ ಸುರಕ್ಷಿತವಾಗಿ ಹೊರಕರೆದುಕೊಂಡು ಬಂದ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನು ಸಹ ಓದಿ : ಪಿಕಪ್ಗೆ ಹೊರಟಿದ್ದ ಟೂರಿಸ್ಟ್ ಗಾಡಿ ಆಕ್ಸಿಡೆಂಟ್, ಪಲ್ಟಿಯಾಗಿ ಮೋರಿಗೆ ಬಿದ್ದ ಬಸ್
ಸದ್ಯ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಾಲಕ ಪ್ರವೀಣ್ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೂ ಸಹಾಯಕ್ಕೆ ದಾವಿಸಿ, ಜೀವ ಉಳಿಸಿದ ಸಾಗರ ಗ್ರಾಮಾಂತರ ಸ್ಟೇಷನ್ ಸಿಬ್ಬಂದಿಗೆ ಶಿವಮೊಗ್ಗ ಎಸ್ಪಿ ಜಿಕೆ ಮಿಥುನ್ಕುಮಾರ್ (shivamogga sp) ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link
