ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಎರಡು ಆಕ್ಸಿಡೆಂಟ್ಗಳು ಸಂಭವಿಸಿದೆ. ನಿನ್ನೆ ರಾತ್ರಿ ಒಂದು ಆಕ್ಸಿಡೆಂಟ್ ಆನಂದಪುರದ ಸಮೀಪ ಸಂಭವಿಸಿದೆ. ಇವತ್ತು ತ್ಯಾಗರ್ತಿ ಬಳಿಯಲ್ಲಿ ಇನ್ನೊಂದು ಆಕ್ಸಿಡೆಂಟ್ ಸಂಭವಿಸಿದೆ. ಎರಡು ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಇದನ್ನು ಸಹ ಓದಿ :ಕೇಸ್ ವಾಪಸ್ತೆಗೆದುಕೊಳ್ಳುವಂತೆ ಬೆದರಿಕೆ/ ತಡರಾತ್ರಿ ಮನೆ ಬಾಗಿಲಿಗೆ ಬಂದು ಕಾರಿಗೆ ಬೆಂಕಿ ಹಚ್ಚಿದ್ರು/ ರಕ್ಷಣೆಯಿಲ್ಲ ಎಂದು ಕಣ್ಣಿರಿಟ್ಟ ಸಂತ್ರಸ್ತೆ
ತ್ಯಾಗರ್ತಿ ಬಳಿಯಲ್ಲಿ ಭೀಕರ ಅಪಘಾತ
ಸಾಗರ ತಾಲ್ಲುಕಿನ ತ್ಯಾಗರ್ತಿ ಬಳಿಯಲ್ಲಿ ಬರುವ ಹೊಸಂತೆ ಎಂಬಲ್ಲಿ ಇವತ್ತು ಮಧ್ಯಾಹ್ನ ಬೈಕ್ಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಪರಿಣಾಮ ಚನ್ನಾಪುರದ ಪ್ರಮೋದ್ ಎಂಬ 25 ವರ್ಷದ ಯುವಕ ಸಾವನ್ನಪ್ಪಿದ್ಧಾರೆ. ತಮ್ಮ ಅಜ್ಜಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗುತ್ತಿದ್ದ ಪ್ರಮೋದ್ ಗೌತಮಪುರದಿಂದ ತ್ಯಾಗರ್ತಿ ಕಡೆಗೆ ಬರುತ್ತಿದ್ದರು. ಈ ವೇಳೆ ಗೌತಮಪುರದ ಕಡೆಗೆ ಹೋಗುತ್ತಿದ್ದ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಪ್ರಮೋದ್ ಸಾವನ್ನಪ್ಪಿದ್ದಾರೆ.
ಆನಂದಪುರದ ಸಮೀಪ ನಿನ್ನೆ ರಾತ್ರಿ ಆಕ್ಸಿಡೆಂಟ್
ಇನ್ನೂ ನಿನ್ನೆ ರಾತ್ರಿ ಆನಂದಪುರದ ಸಮೀಪ ಸಂಭವಿಸಿದ ಅಪಘಾತದಲ್ಲಿ ಸಾಗರ ತಾಲ್ಲೂಕಿನ ಕಾಲೇಜೊಂದರ ವಿದ್ಯಾರ್ಥಿ ಸಾವನ್ನಪ್ಪಿದ್ದು, ಘಟನೆಯಲ್ಲಿ ಬೈಕ್ನಿಂದ ನಿಯಂತ್ರಣ ತಪ್ಪಿ ಬೈಕ್ ಸವಾರ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಸಂಬಂಧ ಮಲೆನಾಡು ಟುಡೆ ಮಾಡಿದ್ದ ವರದಿಯು ಇಲ್ಲಿದೆ ಒದಿ: ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿ ಭೀಕರ ಅಪಘಾತ/ ಸಾಗರ ತಾಲ್ಲೂಕಿನ ವಿದ್ಯಾರ್ಥಿ ಸಾವು
ಇದನ್ನು ಸಹ ಓದಿ : 15 ವರ್ಷದಿಂದ ಕಾಡು ಬಿಟ್ಟು ಬರದ ರೌಡಿ ಗಣೇಶ ಮಧ್ಯಪ್ರದೇಶಕ್ಕೆ! 6 ಮಂದಿಯನ್ನು ಕೊಂದ ಸಕ್ರೆಬೈಲ್ ಬಿಡಾರದ ಈ ಆನೆ ಎಷ್ಟೊಂದು ಉಗ್ರ ಸ್ವರೂಪಿ ಗೊತ್ತಾ?
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link