ಶಿವಮೊಗ್ಗದಲ್ಲಿ ನಿರ್ಮಾಣವಾಗಲಿದೆ ಹೈಟೆಕ್​ ಜೈಲ್​/ ಗೃಹಸಚಿವರು ಹೇಳಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ :  ಶಿವಮೊಗ್ಗದಲ್ಲಿ  ಗೃಹಸಚಿವ ಆರಗ ಜ್ಞಾನೇಂದ್ರರವರು ಮಾದ್ಯಮಗಳ ಜೊತೆ ಮಾತನಾಡಿದ್ರು.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮತ್ತೊಂದು ಚುನಾವಣೆಗೆ ದಿನಾಂಕ ನಿಗದಿ/ ವಿವರ ಇಲ್ಲಿದೆ

ಈ ವೇಳೆ  ಅರವಿಂದ ಲಿಂಬಾವಳಿ ವಿರುದ್ಧದ ಎಫ್ ಐ ಆರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ತತ್ಸಂಬಂಧ  ಪೊಲೀಸರು ತನಿಖೆ ಮಾಡುತ್ತಿದ್ದಾರೆ,  ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ ಎಂದಿದ್ದಾರೆ. ಅಲ್ಲದೆ,  ಅರೆಸ್ಟ್ ಅಭಿಯಾನ ಮಾಡಿದ್ದಾರೆಂದು ಬಂಧನ ಮಾಡಲಾಗದು,  ಅಭಿಯಾನ ಮಾಡಿಲ್ಲ ಅಂತ ಬಂಧಿಸದೆ ಇರಲೂ ಆಗಲ್ಲ,ಕಾನೂನಿನಂತೆ ಕ್ರಮ ಆಗುತ್ತೆ ಎಂದು ತಿಳಿಸಿದರು. 

ಮಗುವಿನ ಚಿಕಿತ್ಸೆಗೆಂದು ಬಂದವರು ಕಾಣೆಯಾಗಿದ್ದಾರೆ/ ಇವರ ಸುಳಿವು ಸಿಕ್ಕರೆ ಮಾಹಿತಿ ನೀಡಿ

ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು, ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ,  ಸೆಂಟ್ರಲ್ ಮಾರ್ಗಸೂಚಿ ಪ್ರಕಾರ ಆಗುತ್ತಿಲ್ಲ, ಆದರೂ ನನ್ನ ಪ್ರಯತ್ನ ಮಾಡುತ್ತಿದ್ದೇನೆ ಎಂದರು

ಇದನ್ನು ಸಹ ಓದಿ : BREAKING NEWS : ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಚುನಾವಣೆಗೆ, ಕ್ಷೇತ್ರಗಳು ಫಿಕ್ಸ್​/ ಎಷ್ಟು ಕ್ಷೇತ್ರಗಳಿವೆ, ಯಾವ್ಯಾವ ಊರುಗಳು ವ್ಯಾಪ್ತಿಯಲ್ಲಿ ಬರುತ್ತವೆ? ಕಂಪ್ಲೀಟ್​ ವಿವರ ಇಲ್ಲಿದೆ ಓದಿ

ಇನ್ನೂ ಇದೇ ವೇಳೆ ರಾಜ್ಯದಲ್ಲಿಯೇ ವಿಶೇಷ ಜೈಲೊಂದನ್ನ ಶಿವಮೊಗ್ಗಕ್ಕೆ ನೀಡಲಾಗಿದೆ,  ಹೈಟೆಕ್ ಆರೋಪಿಗಳಿಗಾಗಿ ಈ ವಿಶೇಷ ಜೈಲು ಇರಲಿದೆ,  ಶಿವಮೊಗ್ಗ ಸೆಂಟ್ರಲ್ ಜೈಲ್ ಆವರಣದಲ್ಲಿ ವಿಶೇಷ ಜೈಲು ನಿರ್ಮಾಣವಾಗಲಿದೆ ಎಂದು ತಿಳಿಸಿದರು. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor