ಶಿವಮೊಗ್ಗದ ರಿಪ್ಪನ್ ಪೇಟೆ ಸಮೀಪ ಭೀಕರ ಅಪಘಾತ/ ಎಕ್ಸೆಲ್ ಗಾಡಿಗೆ ಗುದ್ದಿ ಪಲ್ಟಿಯಾದ ಬೊಲೆರೊ

 ಶಿವಮೊಗ್ಗ ಜಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಅಪಘಾತವೊಂದು ಸಂಭವಿಸಿದೆ.

ಈ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದಿದ್ದು ಹೇಗೆ?

ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಎಕ್ಸ್ಎಲ್ ಸೂಪರ್ ಬೈಕ್ ನಲ್ಲಿದ್ದ ಕಬೀರ್ ಸಾಬ್ ಎಂಬುವವರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಕಬೀರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ

Leave a Comment