ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ / ಸಂಘಟನೆಗಳ ಪ್ರತಿಭಟನೆ

ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ,  ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ  ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು,  ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ. 

ನಡೆದಿದ್ದು ಹೇಗೆ?

ಬೈಕ್​ನಲ್ಲಿ ಬರುತ್ತಿದ್ದ ಸುನೀಲ್​ ಮೇಲೆ ಸಮೀರ್​ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. 

ಘಟನೆ ಕಾರಣ? 

ಸುನೀಲ್ ಮತ್ತು ಸಮೀರ್ ಸಾಗರದ ಉಪ್ಪಾರ ಕೇರಿ ನಿವಾಸಿಗಳು, ಹಿಜಾಬ್ ವಿವಾದದಲ್ಲಿ ಇಬ್ಬರ ನಡುವೆ ಉಂಟಾಗಿದ್ದ ವೈಷಮ್ಯದಿಂದಲೇ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ.  ನಿನ್ನೆಯಷ್ಟೆ ಇದೇ ವಿಷಯಕ್ಕೆ ಸಮೀರ್​ ಸುನೀಲ್​ ಧಮ್ಕಿ ಹಾಕಿದ್ದ ಎನ್ನಲಾಗಿದೆ. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಸಾಗರ ಟೌನ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸ್ತಿದ್ದಾರೆ. 

ಇನ್ನೂ ಈ ಬಗ್ಗೆ ಶಿವಮೊಗ್ಗ ಪೊಲೀಸ್ ಇಲಾಖೆ  ಮಾಹಿತಿ ನೀಡಿದ್ದು, ಸಾಗರದ ಆಭರಣ ಜ್ಯುವೆಲರಿ ಸಮೀಪ ಬರುತ್ತಿದ್ದ ಸುನೀಲ್​ ಎಂಬಾತನ ಮೇಲೆ ಸಮೀರ್​ ಎಂಬಾತ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ತನ್ನ ಬೈಕ್​ನಿಂದ ಆಯುಧವನ್ನು ತೆಗೆದುಕೊಂಡು ಹಲ್ಲೆ ಮುಂದಾಗಿದ್ದಾನೆ. ಈ ಸಂಬಂಧ ಮೂರು ತಂಡಗಳನ್ನು ರಚಿಸಲಾಗಿದ್ದು, ಘಟನೆಗೆ ಕಾರಣ ತಿಳಿಯಲಾಗುತ್ತಿದೆ. ಇನ್ನೂ ಈ ಸಂಬಂದ ಒಂದು ಕೇಸ್​ ದಾಖಲಾಗಿದೆ ಎಂದು ತಿಳಿಸಿದೆ. 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು