Shiralakoppa bandh : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಾಳೆ ಹಿಂದೂ ಜಾಗರಣಾ ವೇದಿಕೆ ಬಂದ್ಗೆ ಕರೆಕೊಟ್ಟಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಸಹ ನಡೆಸಿದೆ. ಜ.30ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಶಿರಾಳಕೊಪ್ಪ ಬಂದ್ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ.
BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!
ಇನ್ನೂಈ ವೇಳೆ ಮಾತನಾಡಿದ ಪ್ರಾಂತ ಸಂಚಾಲಕ ಪ್ರಕಾಶ್ ಕುಕ್ಕೆಹಳ್ಳಿ ಶಿರಾಳಕೊಪ್ಪದಲ್ಲಿ ಹಿಂದೂಗಳನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಸುತ್ತಿದೆ. ನಿರಂತರವಾಗಿ ದೌರ್ಜನ್ಯಗಳು ಆಗುತ್ತಿದೆ. ಕಾಲು ಕೆರೆದು ಜಗಳ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪಾಠ ಕಲಿಸಬೇಕಿದೆ ಎಂದರು.
ಶಿರಾಳಕೊಪ್ಪದಲ್ಲಿ ಹಿಂದೂ ಯುವಕರು ತಪ್ಪಿತಸ್ತರ ಮೇಲೆ ದೂರು ಕೊಟ್ಟರೆ, ಅವರ ಮೇಲೆ ಹಲ್ಲೆ ನಡೆಯುವಂತಹ ಪ್ರಯತ್ನಗಳು ನಡೆದಿದೆ ಎಂದಿರುವ ಹಿಂದೂ ಸಂಘಟನೆಯ ಮುಖಂಡ ಪಕ್ಷಪಾತ ಧೋರಣೆ ಹಾಗೂ ಹಿಂದುಗಳಿಗೆ ಆಗುತ್ತಿರುವ ಅನ್ಯಾಯ ಶಿರಾಳಕೊಪ್ಪ ಬಂದ್ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಬಂದ್ಗೆ ವ್ಯಾಪಾರಸ್ಥರು ಬಂದ್ಗೆ ಬೆಂಬಲ ಸೂಚಿಸಿದ್ದಾರೆ. ಅದೇ ದಿನ ಪಟ್ಟಣದಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ರು.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com