bus yatra :ಸಿದ್ದರಾಮಯ್ಯ ಉತ್ತರ -ಡಿಕೆಶಿವಕುಮಾರ್ ದಕ್ಷಿಣ! ಶಿವಮೊಗ್ಗಕ್ಕೆ ಫೆಬ್ರವರಿ 8-9 ಕ್ಕೆ ಕಾಂಗ್ರೆಸ್​ ಬಸ್​ ಯಾತ್ರೆ

ಕಾಂಗ್ರೆಸ್​​ ಮತದಾರರ ಒಲವು ಪಡೆದುಕೊಳ್ಳುವ ಸಲುವಾಗಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದೆ. ಈ ನಿಟ್ಟಿನಲ್ಲಿ ಇದೇ ಫೆಬ್ರವರಿ 3 ರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್​ ಪ್ರತ್ಯೇಕ ಬಸ್​ ಯಾತ್ರೆ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಯಾತ್ರೆ ಕೈಗೊಂಡರೇ, ಡಿಕೆಶಿ ದಕ್ಷಿಣ ಕರ್ನಾಟಕದಲ್ಲಿ ಯಾತ್ರೆ ಕೈಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಶಿವಮೊಗ್ಗಕ್ಕೆ ಇದೇ ಫೆಬ್ರವರಿ 8 ರಂದು ಡಿಕೆ ಶಿವಕುಮಾರ್ ಯಾತ್ರೆ ಕೈಗೊಳ್ಳಲಿದ್ದಾರೆ. 8 ಕ್ಕೆ ಶಿವಮೊಗ್ಗಕ್ಕೆ ಬಂದು ಶಿಕಾರಿಪುರ, ಸೊರಬ ಸಾಗರದಲ್ಲಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮರುದಿನ 9 ರಂದು ತೀರ್ಥಹಳ್ಳಿ ಹಾಗೂ ಭದ್ರಾವತಿಯಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಳ್ಳಲಿದ್ದಾರೆ. 

Shimoga rural police ಎರಡು ದಿನದಲ್ಲಿ ಎರಡು ಕೇಸ್ ಕ್ಲೀಯರ್​ ! ಶಿವಮೊಗ್ಗ ಪೊಲೀಸರಿಂದ 24 ಗಂಟೆಯಲ್ಲಿ ಮಾಲು ಸಮೇತ ಕಳ್ಳರ ಬಂಧನ

ಸಿದ್ದರಾಮಯ್ಯ ಉತ್ತರ, ಡಿಕೆಶಿ ದಕ್ಷಿಣ

ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್‌ ಅವರು ಫೆ.3ರಿಂದ 9ರವರೆಗೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಫೆ.3 ರಿಂದ 12ರವರೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಯಾತ್ರೆ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಬಸವ ಕಲ್ಯಾಣದ ಅನುಭವ ಮಂಟಪದಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತಮ್ಮ ಬಸ್ ಯಾತ್ರೆಗೆ ಚಾಲನೆ ನೀಡಲಿದ್ದರೆ, ಅದೇ ದಿನ ಡಿ.ಕೆ.ಶಿವಕುಮಾರ್ ಅವರು ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ಯಾತ್ರೆ ಶುರು ಮಾಡಲಿದ್ದಾರೆ.

*BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್*

 *cs shadakshari : ಎಲೆಕ್ಷನ್​ಗೆ ನಿಲ್ತಾರಾ ರಾಜ್ಯಾಧ್ಯಕ್ಷ!? ಸಿಎಸ್​ ಷಡಾಕ್ಷರಿ ಹೇಳಿದ್ದೇನು? ಸರ್ಕಾರಿ ನೌಕರರಿಗೆ ಇನ್ಮುಂದೆ ಸಿಗಲಿದೆ ಈ ಸೌಲಭ್ಯ*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು