MALENADUTODAY.COM | SHIVAMOGGA NEWS | SHIVAMOGGA TALUK
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಸಕ್ರೆಬೈಲ್ ನಲ್ಲಿನ ದೃಶ್ಯವೊಂದು ಇದೀಗ ಎಲ್ಲೆಡೆ ಹರಿದಾಡುತ್ತಿದ್ದು, ವಾಹನ ಸವಾರರ ಮಾನವೀಯತೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಇಲ್ಲಿನ ಕಾಡಿನ ಹಾದಿಯಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ವಾಹನಕ್ಕೆ ಬಡಿದು,ಪೆಟ್ಟು ತಿಂದು ನರಳಾಡುತ್ತಿತ್ತು. ಇದನ್ನ ಗಮನಿಸಿದ ವಾಹನ ಸವಾರರು ತಮ್ಮ ತಮ್ಮ ವಾಹನಗಳನ್ನು ನಿಲ್ಲಿಸಿ ಜಿಂಕೆಯ ಬಳಿ ಬಂದು ಅದರ ಆರೈಕೆಗೆ ಮುಂದಾಗಿದ್ದಾರೆ. ಕಾಲಿಗೆ ತೀವ್ರ ಪೆಟ್ಟು ತಿಂದ ಜಿಂಕೆ ಮೇಲಕ್ಕೆ ಏಳಲು ಸಾಧ್ಯವಾಗದೇ ಒದ್ದಾಡುತ್ತಿತ್ತು.
ಇದನ್ನ ನೋಡಿದ ಅಲ್ಲಿದ್ದ ಸ್ಥಳೀಯರು ಹಾಗೂ ವಾಹನ ಸವಾರರು ಜಿಂಕೆಗೆ ನೀರು ಕುಡಿಸಿ ಅದನ್ನು ಸಾವರಿಸಿದ್ದಾರೆ. ಬಳಿಕ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಜಿಂಕೆಗೆ ಚಿಕಿತ್ಸೆ ಸಿಗುವಂತೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆ ನಡೆದಿದ್ದು ಯಾವಾಗ ಎಂಬುದರ ಬಗ್ಗೆ ವಿಷಯ ತಿಳಿದುಬಂದಿಲ್ಲವಾದರು ಸದ್ಯ ವಾಹನಸವಾರರು ಹಾಗೂ ಸ್ಥಳೀಯರ ಮಾನವೀಯತೆಗೆ ಸಾಕ್ಷಿಯಾಗಿ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com