ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ರೈಲಿಗೆ ಸಿಲುಕಿ ಸ್ಥಳೀಯ ನಿವಾಸಿ ಸಾವು!

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನೆವಟೂರು ಬಳಿ ಟ್ರೈನ್​ಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಈತನನ್ನ ಸ್ಥಳೀಯ ನಿವಾಸಿ ಸುರೇಶ್ ಆಚಾರಿ (43) ಎಂದು ಗುರುತಿಸಲಾಗಿದೆ.  ನಿನ್ನೆ  ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನೂ ಯಾವ ರೈಲಿಗೆ  ಈತ ಸಿಲುಕಿದ್ದ ಹಾಗೂ ಈ ಘಟನೆಗೆ ಕಾರಣ ಏನೆಂಬುವುದು ಸ್ಪಷ್ಟವಾಗಿಲ್ಲಸದ್ಯ  ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸ್ತಿದ್ಧಾರೆ. 

READ : Shivamogga City Assembly Constituency : ಬದಲಾಯ್ತು ಗುಜರಾತ್ ಮಾಡಲ್! ಶಿವಮೊಗ್ಗಕ್ಕೆ ಈಶ್ವರಪ್ಪರವರೇ ನಿಕ್ಕಿ? ಅತಿರಥ ಮಹಾರಥರ ನಡುವೆ ಟಿಕೆಟ್​ ಗೆದ್ದರೇ ಅನುಭವಿ ನಾಯಕ? JP EXCLUSIVE

 ಪ್ರಶಸ್ತಿಗೆ ಅರ್ಜಿ ಆಹ್ವಾನ

 ಪ.ಜಾತಿ/ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.    2023-24 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದಿನಾಂಕ: 05-04-2023 ರಂದು ಜಗಜೀವನರಾಂ ರವರ 116 ನೇ ಜನ್ಮ ದಿನಾಚರಣೆ ಹಾಗೂ ದಿನಾಂಕ: 14-04-2023 ರಂದು ಡಾ.ಬಿ.ಆರ್.ಅಂಬೇಡ್ಕರ್‍ರವರ 132 ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುತ್ತಿದ್ದು ಇದರ ಪ್ರಯುಕ್ತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.         ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ: 20-03-2023 ರೊಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, 100 ಅಡಿ ರಸ್ತೆ, ಪೃಥ್ವಿ ಮ್ಯಾನ್ಷನ್, ವಿನೋಬನಗರ ಶಿವಮೊಗ್ಗ ಈ ಕಚೇರಿಯಲ್ಲಿ ಪಡೆಯಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಎನ್‍ಯುಹೆಚ್‍ಎಂ/ಆರ್‍ಬಿಎಸ್‍ಕೆ ಹುದ್ದೆಗಳ ನೇಮಕಕ್ಕೆ ನೇರ ಸಂದರ್ಶನ

        ಎನ್.ಯು.ಹೆಚ್.ಎಂ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಿರಾಳಕೊಪ್ಪ, ಆನವಟ್ಟಿ, ಹೊಳೆಹೊನ್ನೂರು ಇಲ್ಲಿ ನಮ್ಮ ಕ್ಲಿನಿಕ್‍ನ್ನು ಹೊಸದಾಗಿ ಪ್ರಾರಂಭಿಸುವ ಸಂಬಂಧ ವೈದ್ಯಕೀಯ/ಅರೆ ವೈದ್ಯಕೀಯ ಸಿಬ್ಬಂದಿಗಳ ಆಯ್ಕೆಗೆ ನೇರ ಸಂದರ್ಶನ ಹಾಗೂ ಶಿವಮೊಗ್ಗ ಮತ್ತು ತೀರ್ಥಹಳ್ಳಿ ತಾಲ್ಲೂಕಿಗೆ ಆರ್.ಬಿ.ಎಸ್.ಕೆ ಕಾರ್ಯಕ್ರಮದಡಿ ವೈದ್ಯಾಧಿಕಾರಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

          ಎನ್.ಯು.ಹೆಚ್.ಎಂ ಕಾರ್ಯಕ್ರಮದಡಿ ವೈದ್ಯಾಧಿಕಾರಿ 03 ಹುದ್ದೆಗಳಿದ್ದು ಎಂಬಿಬಿಎಸ್, ಕೆಎಂಸಿ ನೋಂದಣಿ, ಪದವಿ ಪ್ರಮಾಣ ಪತ್ರ ಸಲ್ಲಿಸಬೇಕು. ಶುಶೂಷಕಿಯರು(ಮಹಿಳೆ) 03 ಹುದ್ದೆಗಳಿದ್ದು ಮಾನ್ಯತೆ ಪಡೆದಿರುವ ನರ್ಸಿಂಗ್ ಸಂಸ್ಥೆಯಿಂದ  ಜಿ.ಎನ್.ಎಂ/ಬಿ.ಎಸ್ಸಿ ನರ್ಸಿಂಗ್/ ಡಿಪ್ಲೋಮೋ  ನರ್ಸಿಂಗ್ ಪದವಿ ಪಡೆದಿರಬೇಕು, ಎಂ.ಎಸ್ಸಿ ಅಥವಾ ಬಿ.ಎಸ್ಸಿ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಓರ್ವ ಎಂಬಿಬಿಎಸ್ ಮತ್ತು 02 ಆಯುಷ್ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಬಿ.ಎ.ಎಂ.ಎಸ್/ಎಂ.ಬಿ.ಬಿ.ಎಸ್ ವೈದ್ಯ ಪದ್ದತಿಯನ್ನು ಅಂಗೀಕೃತ ವಿಶ್ವ ವಿದ್ಯಾನಿಲಯದಲ್ಲಿ ಪದವಿ ಪಡೆದಿರಬೇಕು. ಹಾಗೂ ಕಿರಿಯ ಪ್ರಯೋಗಶಾಲಾ ತಂತ್ರಜÐರ 03 ಹುದ್ದೆಗಳಿದ್ದು ದ್ವಿತೀಂiÀi ಪಿ.ಯು.ಸಿ ಯಲ್ಲಿ ವಿಜ್ಞಾನ ವಿಷಯದಲ್ಲಿ ಉತೀರ್ಣ ಮತ್ತು ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ  ಎರಡು ವರ್ಷದ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಪಡೆದಿರಬೇಕು. ಕಂಪ್ಯೂಟರ್ (ಬೇಸಿಕ್ ) ಮತ್ತು ಅಂತರ್ಜಾಲ, ಇತ್ಯಾದಿಗಳ ಬಳಕೆಗೆ ಬೇಕಾಗುವ  ಕಂಪ್ಯೂಟರ್ (ಬೇಸಿಕ್ ) ತರಬೇತಿ ಕಡ್ಡಾಯವಾಗಿ ಉತ್ತಿರ್ಣರಾಗಿರಬೇಕು.

   ನೇರ ಸಂದರ್ಶನವನ್ನು ಮಾರ್ಚ್ 13 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಆವರಣ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ನಡೆಸಲಾಗುವುದು. 12 ಗಂಟೆಯಿಂದ ಸಂಜೆ 5.30ರವರೆಗೆ ನಡೆಸಲಾಗುವುದು.  

      ಎನ್.ಹೆಚ್.ಎಂ/ಎನ್.ಯು.ಹೆಚ್.ಎಂ ಮಾರ್ಗಸೂಚಿಯಂತೆ ವೇತನ ಹಾಗೂ ನೇಮಕಾತಿಯು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2 ರಿಂದ 5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ ,ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:08182-200337 ಹಾಗೂ ಕಚೇರಿಯನ್ನು ಸಂಪರ್ಕಿಸಬಹುದೆಂದು ಆರ್‍ಸಿಹೆಚ್‍ಓ ತಿಳಿಸಿದ್ದಾರೆ.

READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor