SHIVAMOGGA | MALENADUTODAY NEWS
Sep 6, 2024
Brand shimoga news | ಶಿವಮೊಗ್ಗದಲ್ಲಿ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಇದರ ನಡುವೆ ಬ್ರ್ಯಾಂಡ್ ಶಿವಮೊಗ್ಗಕ್ಕಾಗಿ ಸೌಹಾರ್ಧವೇ ಹಬ್ಬವನ್ನ ಆಚರಿಸಲಾಗುತ್ತಿದೆ.

ಏನಿದು ಸೌಹಾರ್ದವೇ ಹಬ್ಬ
ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇದೇ ಸೆಪ್ಟೆಂಬರ್ 12 ರಂದು ಮಧ್ಯಾಹ್ನ 3 ಗಂಟೆಗೆ ಸೌಹಾರ್ದವೇ ಹಬ್ಬವನ್ನ ಆಚರಿಸಲಾಗುತ್ತಿದೆ.
ಸೌಹಾರ್ದತೆಯನ್ನು ಸಾರುವ ನಿಟ್ಟಿನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈನ್ಸ್ ಮೈದಾನದವರೆಗೆ ಶಾಂತಿ ಮೆರವಣಿಗೆ ಆಯೋಜಿಸಲಾಗಿದೆ
ಈ ಬಗ್ಗೆ ನಿನ್ನೆದಿನ ಮಾಹಿತಿ ನೀಡಿದ ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿಯ ಸಂಚಾಲಕ ವಕೀಲ ಕೆ.ಪಿ.ಶ್ರೀಪಾಲ್ ಈ ಜಾಥಾದಲ್ಲಿ ಬಸವ ಕೇಂದ್ರ, ಜಡೆ ಮಠದ ಶ್ರೀಗಳು, ಜಾಮೀಯಾ ಮಸೀದಿಯ ಧರ್ಮಗುರುಗಳು, ಮೌಲ್ವಿಗಳು, ಕ್ರೈಸ್ತ ಪಾದ್ರಿಗಳು ಹಾಗೂ ಪಕ್ಷಾತೀತವಾಗಿ ರಾಜಕೀಯ ಮುಖಂಡರು ಸಹ ಭಾಗವಹಿಸುತ್ತಾರೆ ಅಂತಾ ತಿಳಿಸಿದರು
ರೈತ ಮುಖಂಡ ಎಚ್.ಆರ್. ಬಸವರಾಜಪ್ಪ, ಡಿಎಸ್ಎಸ್ ಮುಖಂಡ ಎಂ. ಗುರುಮೂರ್ತಿ, ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಫಾ. ಪಿಯುಸ್ ಡಿಸೋಜ ಮಾತನಾಡಿ, ಎಲ್ಲಾ ಧರ್ಮಗಳ ಸಾರವೇ ಶಾಂತಿಯಾಗಿದೆ ಎಂದು ತಿಳಿಸಿದರು. ಅಲ್ಲದೆ ಸೌಹಾರ್ದ ಮೆರವಣಿಗೆ ಬಳಿಕ ಸೈನ್ಸ್ ಮೈದಾನದಲ್ಲಿ ಶಾಂತಿ ಸಭೆ ನಡೆಯಲಿದೆ. ಅಲ್ಲಿ ಶಿವಮೊಗ್ಗದ ಭೂಪಟ ರಚಿಸಲಾಗುವುದು ಎಂದು ತಿಳಿಸಿದ್ದಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ