SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 21, 2024
ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ
ಚಿಕ್ಕಮಗಳೂರು ಜಿಲ್ಲೆಯ ಕಾಲೇಜು ಒಂದರಲ್ಲಿ ಪುಸ್ತಕ ತರದಿದ್ದಕ್ಕೆ ವಿದ್ಯಾರ್ಥಿ ಮೇಲೆ ಉಪನ್ಯಾಸಕರೊಬ್ಬರು ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತರಗತಿಗೆ ಡೈರಿ, ಬುಕ್ಸ್ ಸಲಕರಣೆ ತರದಿದ್ದಕ್ಕೆ ಇಲ್ಲಿನ ವಿದ್ಯಾರ್ಥಿ ಒಬ್ಬರ ಮೇಲೆ ಇಲ್ಲಿನ ಉಪನ್ಯಾಸಕರು ಹಲ್ಲೆ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಂಘಟನೆಯೊಂದು ಆಗ್ರಹಿಸಿದೆ.
ನಿತ್ರಾಣಗೊಂಡಿದ್ದ ಪುನುಗು ಬೆಕ್ಕು ರಕ್ಷಣೆ
ಉಂಬ್ಳೆಬೈಲು ವಲಯ ವ್ಯಾಪ್ತಿಯ ನಗರದ ಎಂಆರ್ಎಸ್ ಸಮೀಪದ ಮೆಸ್ಕಾಂ ಕಚೇರಿಯ ಆವರಣದಲ್ಲಿ ನಿತ್ರಾಣ ಸ್ಥಿತಿಯಲ್ಲಿದ್ದ ಪುನುಗು ಬೆಕ್ಕಿನ ಮರಿಯನ್ನು ರಕ್ಷಿಸಲಾಗಿದೆ. ಸುರಕ್ಷತೆಗಾಗಿ ಅದನ್ನು ಶಿವಮೊಗ್ಗ ಮೃಗಾಲಯಕ್ಕೆ ಒಪ್ಪಿಸಲಾಗಿದೆ. ನಿತ್ರಾಣಗೊಂಡಿದ್ದ ಪುನುಗು ಬೆಕ್ಕು ಅಪರೂಪದ ಜೀವಿಯಾಗಿದೆ.
ತುಂಗಾನದಿಯಲ್ಲಿ ಅಪರಿಚಿತ ಶವ
ತುಂಗಾನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ತೂದೂರು ಬಳಿ ನದಿಯ ಬಳಿಯ ಪೊಟರಿನಲ್ಲಿ ಶವ ಇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಆ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಅನ್ವಯ ಸ್ಥಳಕ್ಕೆ ಬಂದ ಮಾಳೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ