ಇನ್ಯಾರನ್ನ ಮಿನಿಸ್ಟರ್ ಮಾಡ್ತೀರಾ? ಭದ್ರಾವತಿಯಲ್ಲಿ ಜೋರಾಯ್ತು ಸೋಶಿಯಲ್ ಮೀಡಿಯಾ ಅಭಿಯಾನ!?

Malenadu Today

KARNATAKA NEWS/ ONLINE / Malenadu today/ May 22, 2023 SHIVAMOGGA NEWS

ಭದ್ರಾವತಿ/ ಶಾಸಕ ಬಿಕೆ ಸಂಗಮೇಶ್​​ಗೆ ಸಚಿವ ಸ್ಥಾನವನ್ನು ಮೊದಲ ಸಂಪುಟ ರಚನೆಯಲ್ಲಿಯೇ ನೀಡಿಲ್ಲ ಎಂದು ತಾಲ್ಲೂಕಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಸಂಗಮೇಶ್ವರ್‌ರವರು ಮಿನಿಸ್ಟರ್ ಪಟ್ಟ ಏರಲೇಬೇಕು… ಎಂಬ ಟ್ಯಾಗ್​ಲೈನ್​ ಅಡಿಯಲ್ಲಿ ಅಭಿಯಾನ ನಡೆಯುತ್ತಿದೆ. 

ಭದ್ರಾವತಿಯಲ್ಲಿ 4 ನೇ  ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾದ ನಮ್ಮ ಬಿ.ಕೆ ಸಂಗಮೇಶ್ವರ್ ಅವರನ್ನು ಮಿನಿಸ್ಟರ್ ಮಾಡದೆ ಇನ್ಯಾರನ್ನ ಮಾಡುತ್ತೀರಾ..? ಎಂಬ ಪ್ರಶ್ನೆಯನ್ನ ಕಾಂಗ್ರೆಸ್​ಗೆ ಸೋಶಿಯಲ್ ಮೀಡಿಯಾದಲ್ಲಿ ಕೇಳಲಾಗುತ್ತಿದೆ. 

 ಇನ್ನೂ ಭದ್ರಾವತಿಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಮಾತ್ರವಲ್ಲದೆ ಪಕ್ಷಭೇದ ಮರೆತು ವಿವಿಧ ಸಮುದಾಯಗಳು, ಸಂಘ-ಸಂಸ್ಥೆಗಳು, ಗಣ್ಯರು ಸಹ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಒಕ್ಕೂರಲಿನಿಂದ ಆಗ್ರಹಿಸಿದ್ದಾರೆ.

ಒಂದು ವೇಳೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆ ಸಹ ಕೇಳಿ ಬರುತ್ತಿದೆ. ಈಗಾಗಲೇ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಸರ್ಕಾರ ರಚನೆ ಆರಂಭದಲ್ಲಿಯೇ ಸಚಿವ ಸ್ಥಾನ ಸಿಗದಿರುವ ಕುರಿತು ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.  

Share This Article