ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ ಪೊಲೀಸರಿಗೆ ಬೇಕಾಗಿದ್ದ ಕಳ್ಳನ ಬಂಧನ!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS

ಶಿಕಾರಿಪುರ/ ಕಳೆದ ವರ್ಷದ ಆಗಸ್ಟ್ ನಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣ ಸಂಬಂಧ ಶಿರಾಳಕೊಪ್ಪ ಪೊಲೀಸ್ ಸ್ಟೇಷನ್​ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿದ್ದು, ಆತನ ಮೂಲಕ,  ದಾವಣಗೆರೆ ಹಾಗೂ ಉತ್ತರ ಕನ್ನಡ ಪೊಲೀಸ್ ಸ್ಟೇಷನ್​ಗಳಲ್ಲಿ ದಾಖಲಾಗಿದ್ದ ಪ್ರಕರಣವೂ ಸೇರಿದಂತೆ ಮೂರು ಪ್ರಕರಣಗಳನ್ನ ಭೇದಿಸಿದ್ದಾರೆ. 

ಪ್ರಕರಣವೇನು?

ದಿನಾಂಕಃ 27-08-2022 ರಂದು  ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದ ವಾಸಿ  ತಮ್ಮ ಹೀರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಶಿರಾಳಕೊಪ್ಪ ಬಸ್ ನಿಲ್ದಾಣದ ಹತ್ತಿರ ಕಳೆದುಕೊಂಡಿದ್ದರು. ಈ ಸಂಬಂಧ ಕಳ್ಳತನದ ದೂರು ದಾಖಲಿಸಿದ್ದರು.  379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಿಸಿದ್ದ ಪೊಲೀಸರು ಇದೀಗ ಪ್ರಕರಣ ಭೇದಿಸಿದ್ದಾರೆ. 

ಮೂರು ಸ್ಟೇಷನ್ ವ್ಯಾಪ್ತಿಯಲ್ಲಿ ಕಳ್ಳತನ

ಈ ಸಂಬಂಧ  08-06-2023  ರಂದು ಪ್ರಕರಣದ ಆರೋಪಿ  ಶಿರಾಳಕೊಪ್ಪ  ಟೌನ್ ನ ನೆಹರೂ ಕಾಲೋನಿ, ನಿವಾಸಿ ಜಿಯಾವುಲ್ಲಾ @ ಜಿಯಾ ನನ್ನ ಬಂಧಿಸಿದ್ದಾರೆ.  

ಆರೋಪಿಯಿಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯ – 01, ದಾವಣಗೆರೆ ಜಿಲ್ಲೆಯ ಬಸವನಗರ ಪೊಲೀಸ್ ಠಾಣೆಯ – 01 ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯ – 01 ಪ್ರಕರಣ ಸೇರಿದಂತೆ ಒಟ್ಟು 03  ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 1,19,000/-  ರೂಗಳ 03 ದ್ವಿ ಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. 


ಡಿಸಿಎಂ ಡಿ ಕೆ ಶಿವಕುಮಾರ್​ರನ್ನ ಭೇಟಿಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ! OPS ವಿಚಾರದಲ್ಲಿ ಮಾತುಕತೆ

ಶಿವಮೊಗ್ಗ/ ಮಹತ್ವದ ಬೆಳವಣಿಗೆಯಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ನಿಯೋಗ ಡಿಸಿಎಂ ಡಿಕೆ ಶಿವಕುಮಾರ್​ರವರನ್ನ ಭೇಟಿಯಾಗಿದೆ. 

ಸರ್ಕಾರದಲ್ಲಿ ಡಿಸಿಎಂ ಸ್ಥಾನಕ್ಕೆ ಏರಿದ ಡಿಕೆಶಿಯವರನ್ನ  ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಭಿನಂದಿಸಿದರು. ಇನ್ನೂ ಇದೇ ವೇಳೆ  ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ  ಮನವಿ ಮಾಡಿದ್ರು. ಇದೇ ವೇಳೆ  7ನೇ ವೇತನ ಆಯೋಗದ ವರದಿಯನ್ನು ಪಡೆದು ಶೀಘ್ರ ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಯಿತು.


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor