SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 4, 2024
ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ಬಳಿ ಇರುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡಲು ಸ್ಥಳಾವಕಾಶ ನೀಡಬೇಕೆಂದು ಶಿವಮೊಗ್ಗ ನಗರದ ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ ಪ್ರತಿ ವರ್ಷ ದೇವಸ್ಥಾನದಲ್ಲಿ ಅಯ್ಯಪ್ಪಸ್ವಾಮಿಯ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗುತ್ತಿದೆ. ಈ ವೇಳೆ ನೂರಾರು ಭಕ್ತಾದಿಗಳು ಇಲ್ಲಿಗೆ ಆಗಮಿಸುತ್ತಾರೆ. ರಸ್ತೆಬದಿ ಜಾಗ ಚಿಕ್ಕದಿರುವುದರಿಂದ ಬೈಕನ್ನು ಪಾರ್ಕಿಂಗ್ ಮಾಡಲು ತೊಂದರೆಯಾಗುತ್ತಿದೆ. ಆದ್ದರಿಂದ ಮಧ್ಯಾಹ್ನ 1 ಗಂಟೆಯಿಂದ 3 ಗಂಟೆವರೆಗೆ ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಲಿಮಿಟೆಡ್ ಪಾರ್ಕಿಂಗ್ ಜಾಗದಲ್ಲಿ ಬೈಕ್ ಗಳನ್ನು ನಿಲ್ಲಿಸಲು ಅವಕಾಶ ನೀಡಿ ಮನವಿ ಮಾಡಲಾಗಿದೆ.

ಮನವಿ ಪತ್ರದಲ್ಲಿ ಏನಿದೆ.
ಶಿವಮೊಗ್ಗದ ಪ್ರತಿಷ್ಠಿತ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿವರ್ಷವು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಮಧ್ಯಾಹ್ನ ಅನ್ನದಾನದ ವ್ಯವಸ್ಥೆ ಇರುತ್ತದೆ. ದಿನನಿತ್ಯ ನೂರಾರು ಜನ ಭಕ್ತಾದಿಗಳು ಬಂದು ಅನ್ನದಾನವನ್ನು ಪ್ರಸಾದವಾಗಿ ಸ್ವೀಕರಿಸುತ್ತಾರೆ. ಈ ಸಂದರ್ಭದಲ್ಲಿ ಅತಿ ಹೆಚ್ಚು ಮಾಲಾಧಾರಿಗಳು ದ್ವಿಚಕ್ರ ವಾಹನದಲ್ಲಿ ಬರುವುದರಿಂದ ವಾಹನಗಳನ್ನು ರಸ್ತೆಯ ಅಕ್ಕ ಪಕ್ಕದಲ್ಲಿ ನಿಲ್ಲಿಸುವಂತಾಗಿದೆ.
ರಸ್ತೆಯು ಚಿಕ್ಕದಾಗಿರುವುದರಿಂದ ಬಹಳಷ್ಟು ತೊಂದರೆ ಆಗುತ್ತಿದ್ದು ಈ ವಿಚಾರವಾಗಿ ದೇವಸ್ಥಾನ ಮಂಡಳಿಯವರು ಪಕ್ಕದಲ್ಲಿ ಇರುವಂತಹ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಪಾರ್ಕಿಂಗ್ ಸ್ಥಳದಲ್ಲಿ ಮಧ್ಯಾಹ್ನ 1:00 ಯಿಂದ 3:00 ತನಕ ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ದ್ವಿಚಕ್ರ ವಾಹನ ನಿಲ್ಲಿಸಲು ಅವಕಾಶ ಕೇಳಲಾಗಿತ್ತು. ಆದರೆ ಅಧಿಕಾರಿಗಳು ಇದಕ್ಕೆ ನಿರಾಕರಿಸುತ್ತಿದ್ದಾರೆ. ಹೀಗಾಗಿ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳಿಗೆ ವಾಹನ ನಿಲ್ಲಿಸಲು ಅವಕಾಶವನ್ನು ಮಾಡಿ ಕೊಟ್ಟು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಿ ಎಂದು ಜಿಲ್ಲಾಡಳಿತದ ಬಳಿ ಮನವಿ ಮಾಡಲಾಗಿದೆ.
SUMMARY | The devotees of Lord Ayyappa in Shivamogga city have submitted a memorandum to the Deputy Commissioner requesting him to provide space for Ayyappa devotees to park their two-wheelers in the smart city limited parking lot in Shivamogga city.
KEYWORDS | Deputy Commissioner, ayyappa swami, smart city limited park, shivamogga,