SHIVAMOGGA | MALENADUTODAY NEWS | ಮಲೆನಾಡು ಟುಡೆ Dec 15, 2024
ಶಿವಮೊಗ್ಗ ಟು ಮೈಸೂರು ರಾತ್ರಿ ಟ್ರೈನ್ಗೆ ಸಂಸದ ಬಿವೈ ರಾಘವೇಂದ್ರ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ ಬೆನ್ನಲ್ಲೆ ಮಲೆನಾಡಿಗೆ ಸಂಬಂಧಿಸಿದಂತೆ ಇನ್ನೊಂದು ಟ್ರೈನ್ ಸಂಚಾರ ನಡೆಸುವ ಸೂಚನೆ ಸಿಕ್ಕಿದೆ. ಇದಕ್ಕೆ ಪೂರಕವಾಗಿ ಚಿಕ್ಕಮಗಳೂರಿನಿಂದ ತಿರುಪತಿಗೆ ಬೆಂಗಳೂರು ಮಾರ್ಗವಾಗಿ ಹೊಸ ರೈಲು ಸಂಚಾರ ಆರಂಭಿಸುವ ಕುರಿತು ವಿವರವಾದ ಮಾಹಿತಿ ಸಂಗ್ರಹಿಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಮಾರ್ಗದಲ್ಲಿ ರೈಲು ಸೇವೆಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ನವದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದರು. ಈ ಸಂಬಂಧ ಮನವಿ ಆಲಿಸಿದ ಸಚಿವ ವಿ ಸೋಮಣ್ಣ ಸಮಗ್ರ ವರದಿ ಸಿದ್ಧಪಡಿಸಿ ನೂತನ ರೈಲ್ವೆ ಸೇವೆಗೆ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಸೋಮಣ್ಣ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
SUMMARY | Union Minister of State for Railways V. Somanna has instructed railway officials to collect detailed information regarding the start of a new train service from Chikkamagaluru to Tirupati via Bangalore.

KEY WORDS | Union Minister of State for Railways V. Somanna , railway officials ,start of a new train service from Chikkamagaluru to Tirupati via Bangalore train