SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 16, 2025
ಶಿವಮೊಗ್ಗ | ಸಚಿವ ಜಮೀರ್ ಅಹ್ಮದ್ಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ವಿಧಾನಪರಷತ್ ಸದಸ್ಯೆ ಬಲ್ಕಿಶ್ ಭಾನುರವರಿಗೆ ಸಚಿವೆ ಸ್ಥಾನವನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಅಧ್ಯಕ್ಷ ಸಯ್ಯದ್ ಮುಜೀಬುಲ್ಲಾ ಆಗ್ರಹಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ಪರಿಣಾಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ ಸಚಿವ ಸಂಪುಟದಲ್ಲಿ ಹಾಗೂ ನಿಗಮ ಮಂಡಳಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ನಿರೀಕ್ಷೆಯಂತೆ ಅವಕಾಶಗಳು ಸಿಕ್ಕಿಲ್ಲ. ಜಮೀರ್ ಅಹಮದ್ರವರು ಜನಪ್ರಿಯ ಜಾತ್ಯಾತೀತ ನಾಯಕರಾಗಿದ್ದು ಜನಪ್ರಿಯ ಶಾಸಕರಾಗಿ ಯಶಸ್ವಿ ಸಚಿವರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿರುತ್ತಾರೆ. ಅಲ್ಲದೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಇವರ ಕೊಡುಗೆ ಅನನ್ಯವಾಗಿದೆ. ಹಾಗೆಯೇ ಬಲ್ಕಿಷ್ ಬಾನುರವರು ವಿಧಾನ ಪರಿಷತ್ ಸದಸ್ಯರಾಗಿ ಜಿಲ್ಲೆಯ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಅತ್ಯಂತ ಕಡಿಮೆ ಅವಧಿಯಲ್ಲಿ ಜನಪ್ರಿಯ ವಿಧಾನ ಪರಿಷತ್ ಸದಸ್ಯರಾಗಿ ಜನಪರವಾಗಿ ಕೆಲಸ ಮಾಡುತ್ತಾ ಸರ್ಕಾರದ ಘನತೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಕ್ರಿಯಾಶೀಲ ಜನನಾಯಕಿಯಾಗಿದ್ದಾರೆ. ಅಲ್ಲದೆ ಜಿಲ್ಲೆಯಿಂದ ಈವರೆಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಸಚಿವರನ್ನಾಗಿ ಮಾಡಿರುವುದಿಲ್ಲ.

ಇನ್ನೇನು ಮಂತ್ರಿಮಂಡಲ ಪುನರ್ ರಚನೆ ಆಗುವ ಸಾಧ್ಯತೆಮ ಇದೆ. ಹಾಗಾಗಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಗಬೇಕಾದ ನ್ಯಾಯವನ್ನು ನೀಡುವ ನಿಟ್ಟಿನಲ್ಲಿ ಜನಪ್ರಿಯ ಸಚಿವರು ಕೊಡುಗೈ ದಾನಿ ಸಮರ್ಥ ನಾಯಕರಾದ ಬಿ.ಜೆಡ್. ಜಮೀರ್ ಅಹಮದ್ ಖಾನ್ರವರಿಗೆ ಉಪಮುಖ್ಯಮಂತ್ರಿಯನ್ನಾಗಿ, ಶಬಲ್ಕಿಷ್ ಬಾನುರವರನ್ನು ಸಚಿವರನ್ನಾಗಿ ನೇಮಕ ಮಾಡಿ ನಿಗಮ ಮಂಡಳಿಗಳಲ್ಲೂ ಸಹ ಅಲ್ಪಸಂಖ್ಯಾತ ಸಮುದಾಯವನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
SUMMARY | Give deputy chief minister’s post to Minister Zameer Ahmed and MLC Balkish Bhanu as minister.
KEYWORDS | deputy chief minister, Minister Zameer Ahmed, MLC Balkish Bhanu, politics,