SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 19, 2025
ಶಿವಮೊಗ್ಗ | ರೈತ ವಿರುದ್ಧ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತಾರಕ್ಷಣಾ ಸಮಿತಿ ವತಿಯಿಂದ ಫೆಬ್ರವರಿ 21 ರಂದು ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಹೆಚ್ ಆರ್ ಬಸವರಾಜಪ್ಪ ತಿಳಿಸಿದರು.
ಇಂದು ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಭದ್ರಾವತಿ ತಾಲೂಕು ಹಾಗೂ ಶಿವಮೊಗ್ಗ ವಿಧಾನಸಭಾ ವ್ಯಾಪ್ತಿಯಲ್ಲಿ ಬಗರ್ ಹುಕುಂ ಸಾಗುವಳಿ ರೈತರು ಮತ್ತು ಶರಾವತಿ ಮುಳಗಡೆಯಿಂದ ಸ್ಥಳಾಂತರಗೊಂಡ ಸಂತ್ರಸ್ಥ ರೈತರಿಗೆ ಈ ಹಿಂದೆ ಬಗರ್ ಹುಕುಂ ಸಮಿತಿ ಸಾಗುವಳಿ ಮುಂಜೂರಾತಿ ಪತ್ರ ಕೊಟ್ಟಿತ್ತು. ಹಾಗಾಗಿ ಈ ಪ್ರದೇಶದ ರೈತರೆಲ್ಲರು ಆ ಭೂಮಿಯಲ್ಲಿ ಕಳೆದ 60-70 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಅಷ್ಟೇ ಅಲ್ಲದೆ ಕಂದಾಯ ಇಲಾಖೆಯಿಂದ ಪಹಣಿ ಹಾಗೂ ಮುಟೇಷನ್ ದಾಖಲಾತಿಗಳನ್ನು ಕೊಡುವಾಗ ಬಗರ್ ಹುಕುಂ ಸಮಿತಿಯಲ್ಲಿ ಅರಣ್ಯ ಅಧಿಕಾರಿಗಳ ಒಪ್ಪಿಗೆ ಮೇರೆಗೆ ದಾಖಲಾತಿಗಳನ್ನು ನೀಡಿರುತ್ತಾರೆ. ಆದರೆ, ಹಲವು ವರ್ಷಗಳ ನಂತರ ಈಗ ಆ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಇಲಾಖೆಯ ಅಧಿಕಾರಿಗಳು ಪಹಣಿಯಲ್ಲಿ ತಿದ್ದುಪಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಜೆ.ಸಿ.ಬಿ. ಯಂತ್ರಗಳ ಮೂಲಕ ಬಗರ್ ಹುಕುಂ ಸಾಗುವಳಿದರರ ಜಮೀನುಗಳಲ್ಲಿರುವ ಅಡಿಕೆ ಮರಗಳನ್ನು ಕಿತ್ತೆಸೆದು ದೌರ್ಜನ್ಯ ಎಸಗುತ್ತಿದ್ದಾರೆ. ರೈತರ ಜಮೀನಿನಲ್ಲಿ ಕಾಲುವೆಗಳನ್ನು ನಿರ್ಮಿಸಿ ರೈತರನ್ನು ಒಕ್ಕಲೆಬ್ಬಿಸುವಾಗ ರೈತರು ಅಧಿಕಾರಿಗಳನ್ನು ಪ್ರಶ್ನಿಸಲು ಹೊದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಶ್ರೀಗಂಧದಮರ, ಬೀಟೆ ಮತ್ತು ಸಾಗುವಾನಿ ಇತರೆ ಬೆಲೆ ಬಾಳುವ ಮರಗಳನ್ನು ಕಡಿದು ಕಾಡನ್ನು ನಾಶ ಮಾಡಿದ್ದೀರಿ ಎಂದು ಕೆಲವು ರೈತರ ಮೇಲೆ ಸುಳ್ಳು ಮೊಕದ್ದಮೆ. ದಾವೆ ಹೂಡುವುದಾಗಿ ಸೂಚನಾ ಪತ್ರಗಳನ್ನು ಕೊಟ್ಟಿರುತ್ತಾರೆ. ಮತ್ತು ಕಂದಾಯ ಇಲಾಖೆಯವರೂ ಸಹ ಇದೆ ರೀತಿ ಸೂಚನಾ ಪತ್ರಗಳನ್ನು ಕೊಟ್ಟಿರುತ್ತಾರೆ. ಈ ರೀತಿ ದೌರ್ಜನ್ಯ ಎಸಗುತ್ತಿರುವ ರೈತ ವಿರೋದಿ ನೀತಿಯನ್ನು ಖಂಡಿಸಿ ರೈತರ ಬೃಹತ್ ಪ್ರತಿಭಟನೆಯನ್ನು ಫೆಬ್ರವರಿ 21 ರಂದು ಬೆಳಿಗ್ಗೆ 10 ಗಂಟೆಗೆ ಭದ್ರಾವತಿ ರಂಗಪ್ಪ ಸರ್ಕಲ್ನಿಂದ ತಹಿಶೀಲ್ದಾರರ ಕಚೇರಿ ಮತ್ತು ಅರಣ್ಯ ಸಂರಕ್ಷಣಾ ಅಧಿಕಾರಿಗಳ ಕಚೇರಿವರೆಗೆ ಪಾದಾಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನೆಗೆ ಬಗರ್ ಹುಕುಂ ಸಾಗುವಳಿ ರೈತರು, ಶರಾವತಿ ಮುಳುಗಡೆ ಸಂತ್ರಸ್ಥ ಸ್ಥಳಾತರಗೊಂಡ ರೈತರು, ಅರಣ್ಯ ಹಕ್ಕು ಸಮಿತಿ ರೈತರು, ರಾಜ್ಯ ರೈತ ಸಂಘಟನೆಗಳು ಹಾಗೂ ಹಸಿರು ಸೇನೆ ರೈತ ಮುಖಂಡರುಗಳು, ಎಲ್ಲಾ ಸಹಕಾರಿ ಸಂಘಟನೆಗಳ ಸದಸ್ಯರು, ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ ಎಂದರು.

SUMMARY | A massive protest will be held at Bhadravathi on February 21, said H R Basavarajappa, leader of the farmers’ union.
KEYWORDS | protest, H R Basavarajappa, Bhadravathi, February 21,