SHIVAMOGGA NEWS TODAY

ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಂದ ಮಗ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Chikkamagaluru news : ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಂದ ಮಗ

ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ಸ್ವಂತ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಭವಾನಿ (52) ಹತ್ಯೆಯಾದ ದುರ್ದೈವಿ ಮಹಿಳೆಯಾಗಿದ್ದು, ಅವರ ಪುತ್ರ ಪವನ್ (28) ಕೊಲೆ ಆರೋಪಿ.

Chikkamagaluru news : ಹೇಗಾಯ್ತು ಘಟನೆ

ಕೂಲಿ ಕೆಲಸ ಮಾಡಿಕೊಂಡು ತಾಯಿಯೊಂದಿಗೆ ವಾಸವಿದ್ದ ಪವನ್, ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ಈ ವೇಳೆ ಯಾವುದೋ ವಿಚಾರಕ್ಕೆ ತಾಯಿಯೊಂದಿಗೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ಹೋಗಿ, ಆತ ತನ್ನ ತಾಯಿಯನ್ನು ಕೊಲೆ ಮಾಡಿದ್ದಾನೆ. ಆ ನಂತರ, ಪ್ರಜ್ಞಾಹೀನನಂತೆ ತಾಯಿಯ ಶವಕ್ಕೆ ಬೆಂಕಿ ಹಚ್ಚಿ, ನಿದ್ರೆಗೆ ಜಾರಿದ್ದಾನೆ ಎನ್ನಲಾಗಿದೆ.

ನೆರೆಹೊರೆಯವರಿಂದ ಮಾಹಿತಿ ಪಡೆದ ಆಲ್ಲೂರು ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪವನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Chikkamagaluru news

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.