ಕುವೆಂಪು ವಿಮಾನ ನಿಲ್ದಾಣ | ನಾಲ್ಕು ಏರ್​ಪೋರ್ಟ್​ಗಳಿಗೆ ಹೆಸರಿಡುವ ಸಂಬಂಧ ರಾಜ್ಯಸರ್ಕಾರದ ಮಹತ್ವದ ನಿರ್ಣಯ!

Kuvempu Airport | The state government has decided to name four airports after great personalities

ಕುವೆಂಪು ವಿಮಾನ ನಿಲ್ದಾಣ |  ನಾಲ್ಕು ಏರ್​ಪೋರ್ಟ್​ಗಳಿಗೆ ಹೆಸರಿಡುವ ಸಂಬಂಧ ರಾಜ್ಯಸರ್ಕಾರದ ಮಹತ್ವದ ನಿರ್ಣಯ!

SHIVAMOGGA|  Dec 15, 2023  |  ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ವಿಮಾನ ನಿಲ್ದಾಣ ಎಂದು ಹೆಸರಿಡಬೇಕು ಎಂದು ಈ ಹಿಂದೇ ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಿತ್ತು.

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಪ್ರಕ್ರಿಯೆ ನಡೆದಿದ್ದವು. ಇದರ ನಡುವೆ ಕುವೆಂಪು ವಿಮಾನ ನಿಲ್ದಾಣವೆಂದು ಶಿವಮೊಗ್ಗ ಏರ್​ಪೋರ್ಟ್​ಗೆ ಹೆಸರು ಇಡುತ್ತಿಲ್ಲ. ಟಿಕೆಟ್​ನಲ್ಲಿಯು ಸಹ ಶಿವಮೊಗ್ಗ ವಿಮಾನ ನಿಲ್ದಾಣ ಎಂದೇ ಪ್ರಿಂಟ್ ಆಗುತ್ತಿದೆ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 

READ : ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಲ್ಯಾಂಡಿಂಗ್ ಪ್ರಾಬ್ಲಮ್​ ಬಗ್ಗೆ ದೆಹಲಿಯಲ್ಲಿ ಪರಿಹಾರ ಹುಡುಕಿದ ಸಂಸದ ಬಿ.ವೈ.ರಾಘವೇಂದ್ರ !

ಈ ನಡುವೆ ರಾಜ್ಯ ಕಾಂಗ್ರೆಸ್​ ಸರ್ಕಾರ,  ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ರಾಜ್ಯದ ಮಹಾನ್ ವ್ಯಕ್ತಿಗಳ ಹೆಸರಿಡುವ ಮಹತ್ವದ ನಿರ್ಣಯವನ್ನು ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಸರ್ವಾನುಮತದಿಂದ ಕೈಗೊಂಡಿದೆ. ಈ ನಿರ್ಣಯದಲ್ಲಿ ನಾಲ್ಕು ಹೆಸರುಗಳನ್ನ ಪ್ರಸ್ತಾಪಿಸಿ ಕೇಂದ್ರಕ್ಕೆ ಕಳುಹಿಸಲು ತೀರ್ಮಾನಿಸಲಾಯಿತು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ- ಕಿತ್ತೂರು ರಾಣಿ ಚೆನ್ನಮ್ಮ, ವಿಜಯಪುರ - ಜಗಜ್ಯೋತಿ ಬಸವಣ್ಣ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ವಿಮಾನ ನಿಲ್ದಾಣ ಹೆಸರಿಡುವ ನಿರ್ಣಯ ಕೈಗೊಳ್ಳಲಾಗಿದೆ.