BREAKING NEWS : ಸಕ್ರೆಬೈಲ್ ಬಿಡಾರದಲ್ಲಿ ವಾಚಮನ್ ಮೇಲೆ ಆನೆ ದಾಳಿ!
BREAKING NEWS: Elephant attacks watchman in Sakrebail camp
MALENADUTODAY.COM | SHIVAMOGGA | #KANNADANEWSWEB
ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಕ್ರೆಬೈಲ್ ಆನೆ ಬಿಡಾರದಲ್ಲಿ (Sakrebyle Elephant Camp) ದುರ್ಘಟನೆಯೊಂದು ಸಂಭವಿಸಿದೆ. ಇಲ್ಲಿನ ವಾಚಮನ್ವೊಬ್ಬರ ಮೇಲೆ ಬಿಡಾರದ ಆನೆಯೇ ( elephant attack) ದಾಳಿ ನಡೆಸಿದೆ. ಇವತ್ತು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಇವತ್ತು ಬೆಳಗ್ಗೆ ಆಲೆ ಆನೆಯನ್ನು ಬಿಡಾರದಿಂದ ಕಾಡಿಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಸಕ್ರೆಬೈಲ್ ಬಿಡಾರದ ಗೇಟ್ ಬಳಿಯಲ್ಲಿರುವ ಆನೆ ಕಲಾಕೃತಿಯ ಮುಂದೆ ವಾಚಮನ್ ಚೌಡಪ್ಪ ನಿಂತಿದ್ದರು. ಅವರ ಮೇಲೆ ಆಲೆ ಆನೆ ದಾಳಿ ನಡೆಸಿದೆ. ವಾಚಮನ್ ಚೌಡಪ್ಪ, ಆನೆಗಳಿಗೆ ಆಗಾಗ ಬಾಳೆಹಣ್ಣು ತಿನ್ನಿಸುತ್ತಿದ್ದರು. ಇವತ್ತು ಸಹ ಹಾಗೇಯೇ ಬಿಡಾರದ ಆನೆಗಳಿಗೆ ಬಾಳೆಹಣ್ಣು ತಿನ್ನಿಸಲು ಮುಂದಾಗಿದ್ದಾರೆ. ಇನ್ನೂ ಮದದಲ್ಲಿದ್ದ ಆಲೆಯು, ಬಾಳೆಹಣ್ಣು ಕೊಡಲು ಬಂದ ಚೌಡಪ್ಪರ ಮೇಲೆ ಅಟ್ಯಾಕ್ ಮಾಡಿದೆ. ಸದ್ಯ ಅದೃಷ್ಟವಶಾತ್ ಚೌಡಪ್ಪ ಪ್ರಾಣಾಪಾಯದಿಂದ ಪಾರಾಗಿದ್ಧಾರೆ. ಶಿವಮೊಗ್ಗದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸ್ತಿದ್ಧಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com