ಗಣೇಶೋತ್ಸವ ಹಾಗೂ ಈದ್ ಮಿಲಾದ್ ಗೂ ಮೊದಲೇ ಶಿವಮೊಗ್ಗದಲ್ಲಿ ನಡೆಯಲಿದೆ ಸೌಹಾರ್ದ ಹಬ್ಬ! ಏನಿದು?

A friendly festival will be held in Shimoga before Ganeshotsava and Eid Milad! what isಗಣೇಶೋತ್ಸವ ಹಾಗೂ ಈದ್ ಮಿಲಾದ್ ಗೂ ಮೊದಲೇ ಶಿವಮೊಗ್ಗದಲ್ಲಿ ನಡೆಯಲಿದೆ ಸೌಹಾರ್ದ ಹಬ್ಬ! ಏನಿದು?

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಗೂ ಮೊದಲೇ ಶಿವಮೊಗ್ಗದಲ್ಲಿ ನಡೆಯಲಿದೆ ಸೌಹಾರ್ದ ಹಬ್ಬ! ಏನಿದು?

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS 

ಇದೇ ಸೆಪ್ಟೆಂಬರ್ 15 ರಂದು ಶಿವಮೊಗ್ಗದಲ್ಲಿ ಸೌಹಾರ್ದ ಹಬ್ಬ ನಡೆಯಲಿದೆ. ಶಿವಮೊಗ್ಗದಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ  ಸೆಪ್ಟೆಂಬರ್​ 15ರಂದು ಸಂಜೆ 4 ರಿಂದ 6 ಗಂಟೆಯವರೆಗೆ ಸಿಮ್ಸ್ ಮೆಡಿಕಲ್ ಕಾಲೇಜಿನಿಂದ ಸೈನ್ಸ್ ಮೈದಾನದವರೆಗೆ ಸೌಹಾರ್ದವೇ ಹಬ್ಬ ನಡಿಗೆಯನ್ನು ಮತ್ತು ಶಾಂತಿ ಸಭೆ ಆಯೋಜಿಸಲಾಗಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಟಿಯಲ್ಲಿ ಸಮಿತಿ ಸಂಚಾಲಕ ಕೆ.ಪಿ. ಶ್ರೀಪಾಲ್‌ ಮಾಹಿತಿ ನೀಡುತ್ತಾ ಗಣಪತಿ ಮತ್ತು ಈದ್‌ ಮಿಲಾದ್ ಹಬ್ಬಗಳು ಒಟ್ಟಿಗೆ ಬಂದಿವೆ. ಊರಿನ ಎಲ್ಲಾ ಧರ್ಮದ ಬಂಧುಗಳು ಈ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕಾಗಿದೆ ಎಂದರು. 

ಈ ಕುರಿತು ಸೌಹಾರ್ದವೇ ಹಬ್ಬ ಎಂಬ ಹೆಸರಿನಲ್ಲಿ ಈ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ  ಸೈನ್ಸ್ ಮೈದಾನದವರೆಗೆ ಕಾಲ್ನಡಿಗೆ ಮೂಲಕ ಬಂದು ರಾಷ್ಟ್ರ ಧ್ವಜ ಹಿಡಿದು ನಾವೆಲ್ಲ ಭಾರತಾಂಬೆಯ ಮಕ್ಕಳು ಎಂಬ ಸಂದೇಶ ಸಾರುತ್ತೇವೆ ಎಂದು ತಿಳಿಸಿದರು.    


ಇನ್ನಷ್ಟು ಸುದ್ದಿಗಳು