ಶಿವಮೊಗ್ಗದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಸಾವು!

A woman was killed after being struck by lightning in Shimoga.

ಶಿವಮೊಗ್ಗದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಸಾವು!

KARNATAKA NEWS/ ONLINE / Malenadu today/ May 29, 2023 SHIVAMOGGA NEWS

ಶಿವಮೊಗ್ಗದಲ್ಲಿ ಸಿಡಿಲಿಗೆ ಓರ್ವ ಮಹಿಳೆ ಬಲಿಯಾಗಿದ್ಧಾಳೆ. ವಿನೊಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಶ್ರಯ ಬಿ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ.  ಲಕ್ಷ್ಮೀಬಾಯಿ W/o ಕುಮಾರ ನಾಯಕ, ಮೃತ ಮಹಿಳೆ. 

ಇವರು ಇವತ್ತು ಕುರಿಗಳಿಗೆ ಮೇವು ತರಲು ಹೋದಾಗ ಸಿಡಿಲು ಬಡಿದಿದೆ. ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ಧಾರೆ. ಈ ಸಂಬಂಧ ಸ್ಥಳಕ್ಕೆ ವಿನೋಬನಗರ ಪೊಲೀಸರು ಭೇಟಿನೀಡಿದ್ಧಾರೆ. 

 ಇನ್ನೂ ನಗರದಲ್ಲಿ ಬೀಸಿದ ಬಾರೀ ಗಾಳಿಗೆ ಹಲವೆಡೆ ಮರ ಬಿದ್ದು ಹಾನಿ ಉಂಟಾಗಿದೆ.  ತೆಂಗಿನ ಮರವೊಂದು ಬಿದ್ದು ಎರಡು ಕಾರುಗಳು ಜಖಂಗೊಂಡ ಘಟನೆ ಸುರಭಿ ಹೋಟೆಲ್ ಬಳಿ ಸಂಭವಿಸಿದೆ. 

ಇಲ್ಲಿರುವ ಕೆನರಾ ಬ್ಯಾಂಕ್ ಬಳಿಯಲ್ಲಿದ್ದ ತೆಂಗಿನ ಮರವೊಂದು ಬಿದ್ದು ಎರಡು ಕಾರುಗಳು ಬಹುತೇಕ ಜಖಂಗೊಂಡಿದೆ. ಅದೃಷ್ಟಕ್ಕೆ ಯಾವುದೇ ಪ್ರಾಣಪಾಯ ಉಂಟಾಗಿಲ್ಲ. 

ಇನ್ನೂ ದೈವಜ್ಞ ಕಲ್ಯಾಣ ಮಂದಿರದ ಹತ್ತಿರ ತೆಂಗಿನಮರವೊಂದು ಉರುಳಿಬಿದ್ದಿದ್ದು ಮನೆಯೊಂದರ ಕಾಂಪೌಂಡ್ ಹಾಳಾಗಿದೆ.  



ಅತ್ತ ಸೋಮಿನಕೊಪ್ಪದಲ್ಲಿ ಮಳೆಗಾಳಿ ಮನೆಯೊಂದರ ಶೀಟುಗಳು ಹಾರಿಹೋಗಿವೆ. ಭಾರೀ ಗಾಳಿಗೆ ಈ ಅವಾಂತರ ಸಂಭವಿಸಿದ್ದು, ಯಾರಿಗೂ ಅಪಾಯ ಉಂಟಾಗಿಲ್ಲ.