KARNATAKA NEWS/ ONLINE / Malenadu today/ Jul 1, 2023 SHIVAMOGGA NEWS
ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರಕ್ಕಿಂಗ್ಗೆ ಎಂದು ಬಂದಿದ್ದ ಪ್ರವಾಸಿಗನೊಬ್ಬ ಹೃದಯಘಾತದಿಂದಾಗಿ ಸಾವನ್ನಪ್ಪಿದ್ಧಾನೆ. 27 ವರ್ಷದ ರಕ್ಷಿತ್ ಮೃತ ಯುವಕ. ಮೂಲತಃ ಮೈಸೂರು ಕಡೆಯವರು.
ಮೈಸೂರಿನಿಂದ ಒಟ್ಟಾರೆ ಏಳು ಮಂದಿ ಟ್ರಕ್ಕಿಂಗ್ಗೆ ಅಂತಾ ಚಿಕ್ಕಮಗಳೂರಿಗೆ ಆಗಮನಿಸಿದ್ದರು, ಕುದುರೆ ಮುಖದಿಂದ ನೇತ್ರಾವತಿ ಪೀಕ್ ಸ್ಪಾಟ್ಗೆ ತೆರಳುತ್ತಿದ್ದರು. ಈ ನಡುವೆ ದಾರಿಯಲ್ಲಿಯೇ ರಕ್ಷಿತ್ಗೆ ಎದೆನೋವು ಕಾಣಿಸಿದೆ. ತಕ್ಷಣಕ್ಕೆ ಅವರಿಗೆ ಚಿಕಿತ್ಸೆ ನೀಡಲು ಸಹ ಅಲ್ಲಿ ಸಾಧ್ಯವಿರಲಿಲ್ಲ. ಇನ್ನೂ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಕಳಸಕ್ಕೆ ರವಾನೆ ಮಾಡಿದ್ದು, ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ದಾಖಲಾಗಿದೆ.