ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ದಾಸಕೊಪ್ಪ ಬಳಿಯಲ್ಲಿ ಅಪಘಾತವೊಂದು ಸಂಭವಿಸಿದೆ. ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಅವರನ್ನ ಆನಂದಪುರದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಸಾಗರದ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿ ಆನಂದಪುರದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಶಶಿದರ್ ಹಾಗೂ ಅವರ ಪತ್ನಿಗೆ ಪೆಟ್ಟುಬಿದ್ದಿದ್ದು, ಅವರನ್ನು ಆಸ್ಪತ್ರೆಗೆದಾಖಲಿಸಲಾಗಿದೆ. ಸ್ಥಳಕ್ಕೆ ಆನಂದಪುರ ಉಪಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
