accident : ಕಾರು ಹಾಗೂ ಟಿಪ್ಪರ್​ ನಡುವೆ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

prathapa thirthahalli
Prathapa thirthahalli - content producer

ಕಾರು ಹಾಗು ಟಿಪ್ಪರ್​ ಲಾರಿಯ ನಡುವೆ  ನಿನ್ನೆ ಅಂದರೆ ಏಪ್ರಿಲ್​ 24 ರ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬೈರಾಪುರದಲ್ಲಿ ನಡೆದಿದೆ.

accident :  ಹೇಗಾಯ್ತು ಘಟನೆ

ಶಿಕಾರಿಪುರದಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಲಾರಿ ಗೋವಾದಿಂದ ಹಿತ್ಲದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

- Advertisement -

ಪರಿಣಾಮ ಕಾರಿನ ಚಾಲಕ ಸಮೀವುಲ್ಲಾ ಹಾಗೂ ಮಹಿಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ  ನಾಲ್ಕು ಜನರಿಗೆ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು,  ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

TAGGED:
Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *