ನ. 13 ರಿಂದ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ: ಯಾರೆಲ್ಲಾ ಭಾಗವಹಿಸಬಹುದು?

prathapa thirthahalli
Prathapa thirthahalli - content producer

Agniveer Recruitment Rally  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದೆ. ಈ ನೇಮಕಾತಿ ರ‍್ಯಾಲಿಗೆ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕಳೆದ ಜೂನ್ 30 ರಿಂದ ಜುಲೈ 10ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮಾತ್ರ ಈ ರ‍್ಯಾಲಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ಎಂಬ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ (ಪ್ರ) ಡಾ. ಸಿ.ಎ. ಹಿರೇಮಠ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

- Advertisement -

ಅಗ್ನಿವೀರ್ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣಕ್ಕೆ ಹಾಜರಾಗಬೇಕು. ಈ ಮೂಲಕ ದೇಶದ ಯುವಕರಿಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಮತ್ತೊಂದು ದೊಡ್ಡ ಅವಕಾಶ ಲಭ್ಯವಾಗಿದೆ.

Malenadu Today

Agniveer Recruitment Rally

http://ಶಿವಮೊಗ್ಗ : ರೈಲಿನಲ್ಲಿ ಸಿಕ್ತು 83 ಸಾವಿರ ಮೌಲ್ಯದ ಈ ವಸ್ತು : ಪೊಲೀಸರು ಮಾಡಿದ್ದೇನು ಗೊತ್ತಾ,,? https://malenadutoday.com/rpf-shivamogga-recovers-and-returns-hearing-aid/ via @malnadtoday

 

Share This Article