SHIVAMOGGA NEWS TODAY

ಆಗುಂಬೆ ಟನಲ್​ ವಿಚಾರ, ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದೇನು. ವಿಡಿಯೋ ನೋಡಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ:  ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣ ಕಾರ್ಯಕ್ಕೆ  ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯನ್ನು ದ್ವಿಪಥ ರಸ್ತೆ ಹಾಗೂ ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ   ಕಾರ್ಯ ಸಾಧ್ಯತೆ ಅಧ್ಯಯನ ಮತ್ತು ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಈಗಾಗಲೇ  ಟೆಂಡರ್ ಆಹ್ವಾನಿಸಿದೆ. 

ಶಿವಮೊಗ್ಗ: ಸೋಗಾನೆ ಜೈಲಿಗೆ ಗಾಂಜಾ, ಮೊಬೈಲ್ ಎಸೆದಿದ್ದ  ನಾಲ್ವರು ಅರೆಸ್ಟ್​​

 ಈ ಕುರಿತು ಇಂದು ಸಂಸದ ಬಿವೈ ರಾಘವೇಂದ್ರ ಮಾಹಿತಿ ನೀಡಿ ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯಲ್ಲಿ ರಸ್ತೆಯನ್ನು ದ್ವಿಪಥ (2-Lane) ರಸ್ತೆಯನ್ನಾಗಿ ಮತ್ತು ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸಲು ಯೋಜಿಸಲಾಗಿದೆ. ಈ ಯೋಜನೆಯಡಿ 4 ಲೇನ್ ವೈಡಿಂಗ್ ಮತ್ತು ಆಗುಂಬೆ ಟನಲ್ ನಿರ್ಮಾಣದ ಡಿಪಿಆರ್ ಸಿದ್ಧಪಡಿಸಲು ಒಟ್ಟು 2.2 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ 6 ತಿಂಗಳ ಅವಧಿಯಲ್ಲಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. 

ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಯೋಜನೆ ಅತ್ಯಂತ ಜಾಗರೂಕತೆಯಿಂದ ಕೂಡಿದೆ. “ಹಿಂದಿನ ಅತ್ಯಾಧುನಿಕ ತಂತ್ರಜ್ಞಾನವನ್ನೇ ಬಳಸಿಕೊಂಡು ಟನಲ್ ನಿರ್ಮಿಸಲು ಉದ್ದೇಶಿಸಲಾಗಿದೆ. ಮಲೆನಾಡಿನ ಸೂಕ್ಷ್ಮ ಪರಿಸರಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಮತ್ತು ಅರಣ್ಯ ಪ್ರದೇಶಕ್ಕೆ ತೊಂದರೆಯಾಗದಂತೆ ಸುರಂಗ ಮಾರ್ಗವನ್ನು ಹೇಗೆ ನಿರ್ಮಿಸಬಹುದು ಎಂಬ ಬಗ್ಗೆ ತಜ್ಞರು ಯೋಚಿಸುತ್ತಿದ್ದಾರೆ. “ಎಂದು ರಾಘವೇಂದ್ರ ಅವರು ವಿವರಿಸಿದರು.

Agumbe Tunnel MP Raghavendra Confirms
Agumbe Tunnel MP Raghavendra Confirms

Agumbe Tunnel MP Raghavendra Confirms

Agumbe Tunnel MP Raghavendra Confirms
Agumbe Tunnel MP Raghavendra Confirms

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.