SHIVAMOGGA NEWS TODAY

ಅಶಕ್ತ ಮಹಿಳೆಗೆ ಆಸರೆಯಾದ ಶಿವಮೊಗ್ಗದ ಅಕ್ಕ ಪಡೆ: ಮಾನವೀಯತೆ ಮೆರೆದ ಪೊಲೀಸ್ ತಂಡ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Akka Pade Police ಶಿವಮೊಗ್ಗ: ನಗರದ ಕೆಎಸ್ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಕ್ಕ ಪಡೆ ತಂಡದವರು ಸಂಕಷ್ಟದಲ್ಲಿದ್ದ ವೃದ್ಧೆಯೊಬ್ಬರಿಗೆ ನೆರವಾಗುವ ಮೂಲಕ ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಗುರುತಿಸಿ ಅವರಿಗೆ ಸುರಕ್ಷಿತವಾಗಿ ಊರು ತಲುಪಲು ವ್ಯವಸ್ಥೆ ಮಾಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಶಿವಮೊಗ್ಗದ ಬಸ್ ನಿಲ್ದಾಣದಲ್ಲಿ ಎಂದಿನಂತೆ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ, ಸುಮಾರು 55 ವರ್ಷ ಪ್ರಾಯದ ಮಹಿಳೆಯೊಬ್ಬರು ಮಾನಸಿಕ ಹಾಗೂ ದೈಹಿಕ ನೋವಿನಿಂದ ಬಳಲುತ್ತಿರುವುದು ತಂಡದ ಗಮನಕ್ಕೆ ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಅಕ್ಕ ಪಡೆಯ ಸದಸ್ಯರು, ಮಹಿಳೆಯ ಬಳಿ ತೆರಳಿ ಸಾಂತ್ವನ ಹೇಳಿ ಅವರ ಮಾಹಿತಿ ಪಡೆದಿದ್ದಾರೆ. ಈ ವೇಳೆ ಅವರು ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬಂದಿದ್ದು, ಆಕಸ್ಮಿಕವಾಗಿ ತಮ್ಮ ಬ್ಯಾಗ್ ಕಳೆದುಕೊಂಡು ದಿಕ್ಕುತೋಚದೆ ನಿಂತಿರುವುದು ಬೆಳಕಿಗೆ ಬಂದಿದೆ. 

ಮಹಿಳೆಗೆ ತನ್ನೂರಿಗೆ ಮರಳಲು ಹಣವಿಲ್ಲದೆ ಪರದಾಡುತ್ತಿದ್ದ ಸಂದರ್ಭವನ್ನು ಅರಿತ ಪೊಲೀಸ್ ತಂಡ, ಸ್ಥಳದಲ್ಲೇ ಅವರಿಗೆ ಬಸ್ ಟಿಕೆಟ್ ದರವನ್ನು ಭರಿಸಿದ್ದಾರೆ. ಬಳಿಕ ಶಿವಮೊಗ್ಗದಿಂದ ಹೊನ್ನಾಳಿಗೆ ತೆರಳುವ ಕೆಎಸ್ಆರ್‍ಟಿಸಿ ಬಸ್ ಹತ್ತಿಸಿ, ಅವರು ಸುರಕ್ಷಿತವಾಗಿ ಪ್ರಯಾಣ ಬೆಳೆಸುವಂತೆ ನೋಡಿಕೊಂಡಿದ್ದಾರೆ.

Akka Pade Police Helps Helpless Woman  

Akka Pade Police Helps Helpless Woman 
Akka Pade Police Helps Helpless Woman 
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.