ನರೆಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಇದನ್ನೆಲ್ಲಾ ಕೊಂಡೊಯ್ಯುವಂತಿಲ್ಲ! ಯಾವುದಕ್ಕೆಲ್ಲಾ ನಿಷೇಧ ?

All this cannot be carried while going to Narendra Modi's event.

ನರೆಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಇದನ್ನೆಲ್ಲಾ ಕೊಂಡೊಯ್ಯುವಂತಿಲ್ಲ! ಯಾವುದಕ್ಕೆಲ್ಲಾ ನಿಷೇಧ ?

KARNATAKA NEWS/ ONLINE / Malenadu today/ May 6, 2023 GOOGLE NEWS

ಶಿವಮೊಗ್ಗ/ Narendramodi/  ಪ್ರದಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸ್ತಿರೋ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಬಂದೋಬಸ್ತ್ ಮಾಡುತ್ತಿದೆ. ಕೇಂದ್ರ ಭದ್ರತಾ ಸಂಸ್ಥೆಗಳ ನಿರ್ದೇಶನದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಕೆಲವೊಂದು ನಿಬಂಧನೆಗಳನ್ನು ತಿಳಿಸಿದೆ. 

 

ಮೋದಿ ಕಾರ್ಯಕ್ರಮದಲ್ಲಿ ಇದಕ್ಕೆಲ್ಲಾ ನಿಷಿದ್ಧ 

ದಿನಾಂಕ: 07-05-2023 ರಂದು ನರೇಂದ್ರ ಮೋದಿ ಆಯನೂರಿನಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ಮಾತ್ರ ತೆಗೆದುಕೊಂಡು ಹೋಗಬಹುದು. ಉಳಿದಂತೆ, ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ , ಶರ್ಟ್ , ಕರವಸ್ತ್ರ, ಪ್ಲೇ ಕಾರ್ಡ್,  ಬೆಂಕಿ ಪೊಟ್ಟಣ , ಲೈಟರ್, ಯಾವುದೇ ಸ್ಪೋಟಕ, ಅಪಾಯಕಾರಿ ವಸ್ತುಗಳು ಹಾಗೂ ಇತರೆ ಯಾವುದೇ ವಸ್ತುಗಳನ್ನು ತರುವಂತಿರುವುದಿಲ್ಲ.




 

ಆಯನೂರಿನಲ್ಲಿ ಮೋದಿ ಕಾರ್ಯಕ್ರಮ/ ರಿಪ್ಪನ್​ಪೇಟೆ, ಶಿಕಾರಿಪುರ, ಸಾಗರ ಶಿವಮೊಗ್ಗ ಸಂಚಾರ ಮಾರ್ಗ ಬದಲಾವಣೆ!  ರೂಟ್ ಡಿಟೇಲ್ಸ್ ಇಲ್ಲಿದೆ 

 

ಶಿವಮೊಗ್ಗ/ Narendra modi/  ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೆಲವೊಂದು ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ  

 

ಸಂಚಾರ ಮಾರ್ಗದಲ್ಲಿ ಬದಲಾವಣೆ 

 

ದಿನಾಂಕ: 07-05-2023 ರಂದು ನರೇಂದ್ರ ಮೋದಿ,  ಆಯನೂರಿಗೆ ಭೇಟಿ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ ವ್ಯತ್ಯಯ ಆಗದಂತೆ  ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. 



ಸಾಗರದಿಂದ ಶಿವಮೊಗ್ಗ ಕಡೆಗೆ ಬರುವ ಲಘು ವಾಹನಗಳು

 

ಆನಂದಪುರ ಎಡೆಹಳ್ಳಿ ಸರ್ಕಲ್ – ಚೊರಡಿ – ಕುಂಸಿ - ಕುಂಸಿ ರೈಲ್ವೆ ಗೇಟಿನ ಹತ್ತಿರ ಎಡಕ್ಕೆ ತಿರುಗಿ ಹಾರ್ನಳ್ಳಿ - ಬೈರನಕೊಪ್ಪ -ಹಿಟ್ಟೂರು ಕ್ರಾಸ್ ಬಲಕ್ಕೆ ತಿರುಗಿ ಶಿವಮೊಗ್ಗಕ್ಕೆ ಬಂದು ಸೇರುವುದು.

 

ಸಾಗರದಿಂದ ಶಿವಮೊಗ್ಗದ ಕಡೆಗೆ ಬರುವ ಭಾರಿ ಮತ್ತು ಸರಕು ವಾಹನಗಳು

 

ಆನಂಪುರ - ಶಿಕಾರಿಪುರ - ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು. 

 

ಶಿವಮೊಗ್ಗದಿಂದ ಸಾಗರಕ್ಕೆ ಹೋಗುವ ಲಘು ವಾಹನಗಳು

 

ಶಿವಮೊಗ್ಗದಿಂದ ಸೋಮಿನಕೊಪ್ಪ – ಗೆಜ್ಜೇನಹಳ್ಳಿ - ಮುದುವಾಲ – ಹಾರ್ನಳ್ಳಿ -  ಕುಂಸಿ ರೈಲ್ವೆ ಗೇಟಿನ ಹತ್ತಿರ ಬಲಕ್ಕೆ ತಿರುಗಿ ಸಾಗರಕ್ಕೆ ಹೋಗುವುದು.

 

ಶಿವಮೊಗ್ಗದಿಂದ ಸಾಗರಕ್ಕೆ ಹೋಗುವ ಭಾರಿ ಮತ್ತು ಸರಕು ವಾಹನಗಳು

 

ಶಿವಮೊಗ್ಗದಿಂದ ಹೊನ್ನಾಳಿ  – ಶಿಕಾರಿಪುರ - ಆನಂದಪುರ ಮೂಲಕ ಸಾಗರಕ್ಕೆ ಹೋಗುವುದು

 

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವ ಭಾರಿ ಮತ್ತು ಲಘು ವಾಹನಗಳು

 

ಶಿವಮೊಗ್ಗದಿಂದ ಹೊನ್ನಾಳಿ ಮೂಲಕ ಶಿಕಾರಿಪುರಕ್ಕೆ ಹೋಗುವುದು.

 

ಶಿಕಾರಿಪುರ ದಿಂದ ಶಿವಮೊಗ್ಗಕ್ಕೆ ಬರುವ ಭಾರಿ ಮತ್ತು ಲಘು ವಾಹನಗಳು

 

ಶಿಕಾರಿಪುರ ದಿಂದ ಹೊನ್ನಾಳಿ ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು. 

 

ಶಿವಮೊಗ್ಗದಿಂದ ರಿಪ್ಪನ್ ಪೇಟೆ ಹಾಗೂ ಹೊಸನಗರ ಕಡೆಗೆ ಹೋಗುವ ಭಾರಿ ಮತ್ತು ಲಘು ವಾಹನಗಳು

 

ಶಿವಮೊಗ್ಗದಿಂದ ಮಂಡಗದ್ದೆ - ಕೋಣಂದೂರು – ರಿಪ್ಪನಪೇಟೆ ಮೂಲಕ ಹೊಸನಗರಕ್ಕೆ ಹೋಗುವುದು.

 

ರಿಪ್ಪನಪೇಟೆ ಹೊಸನಗರದಿಂದ ಶಿವಮೊಗ್ಗಕ್ಕೆ ಬರುವ ಭಾರಿ ಮತ್ತು ಲಘು ವಾಹನಗಳು 

 

ಕೋಣಂದೂರು – ಸಿ. ಕೆ.  ರಸ್ತೆ - ಮಂಡಗದ್ದೆ - ಮಾಳೂರು ಮೂಲಕ ಶಿವಮೊಗ್ಗಕ್ಕೆ ಬಂದು ಸೇರುವುದು.

 

 

Malenadutoday.com Social media