KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಬಿಲ್ಲೇಶ್ವರದಲ್ಲಿ ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಅವರ ಸಮೀಪವೇ ಹೋಗುತ್ತಿದ್ದ ಲಾರಿಯೊಂದರಿಂದ ಮರದ ತುಂಡು ಬಿದ್ದಿದೆ. ಪರಿಣಾಮ ಘಟನೆಯಲ್ಲಿ ವ್ಯಕ್ತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ
ಗಾಯಗೊಂಡವರನ್ನ 32 ವರ್ಷದ ನವೀನ್ ಎಂದು ಗುರುತಿಸಲಾಗಿದೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ರಿಪ್ಪನ್ ಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಪ್ರಕರಣವಾಗಿದೆ.
ಇಲ್ಲಿನ ಬಿಲ್ಲೇಶ್ವರ ಗ್ರಾಮದ ಬಳಿಯಲ್ಲಿರುವ ರಸ್ತೆಯಲ್ಲಿ ನವೀನ್ ಬೈಕ್ನಲ್ಲಿ ತೆರಳುತ್ತಿದ್ದರು. ಅದೇ ವೇಳೆ ಟಿಂಬರ್ ಲಾರಿಯೊಂದು ಸಾಗುತ್ತಿತ್ತು. ಲೋಡ್ ಗಾಡಿಯಿಂದ ಮರದ ತುಂಡೊಂದು ಕಳಚಿ ಬಿದ್ದಿದೆ. ಬಿದ್ದ ಮರ ನೇರವಾಗಿ ನವೀನ್ರ ಕುತ್ತಿಗೆ ಬಡಿದಿದ್ದು, ಬಡಿದ ರಭಸಕ್ಕೆ ಕುತ್ತಿಗೆ ತುಂಡಾಗಿ ಗಾಯವಾಗಿದೆ.
ವಿಷಯ ತಿಳಿದ ತಕ್ಷಣವೇ ಅವರನ್ನು ಹುಂಚಾ ಪ್ರಾಥಮಿಕ ಕೇಂದ್ರಕ್ಕೆ ರವಾನಿಸಿದ್ದಾರೆ. ಅಲ್ಲಿಂದ ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.
ಇನ್ನಷ್ಟು ಸುದ್ದಿಗಳು
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?
