SHIVAMOGGA NEWS TODAY

ಆನಂದಪುರ: ಅಡಿಕೆ ವ್ಯಾಪಾರಿ ವಿನಯ್ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ: ತಾಲೂಕಿನ ಆನಂದಪುರದಲ್ಲಿ  ಅಡಿಕೆ ವ್ಯಾಪಾರ ಮಾಡುತ್ತಿದ್ದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಅಶೋಕ ರಸ್ತೆಯ ನಿವಾಸಿ ನಾಗರಾಜ್ ಎಂಬುವವರ ಪುತ್ರ ವಿನಯ್ (27) ಮೃತಪಟ್ಟ ದುರ್ದೈವಿ. 

ಕಳೆದ ಕೆಲವು ದಿನಗಳಿಂದ ವಿನಯ್ ತೀವ್ರ ಮೌನಕ್ಕೆ ಜಾರಿದ್ದರು ಎಂದು ಹೇಳಲಾಗಿದೆ. ಅವರು ಯಾರೊಂದಿಗೂ ಹೆಚ್ಚಾಗಿ ಬೆರೆಯುತ್ತಿರಲಿಲ್ಲ ಮತ್ತು ಮನಸ್ಸಿನಲ್ಲಿದ್ದ ನೋವು ಅಥವಾ ವಿಚಾರಗಳನ್ನು ಹಂಚಿಕೊಳ್ಳುತ್ತಿರಲಿಲ್ಲ. ಮನೆಯವರು ಎಷ್ಟೇ ಮಾತನಾಡಿಸಲು ಪ್ರಯತ್ನಿಸಿದರೂ ಸಕಾರಾತ್ಮಕವಾಗಿ ಸ್ಪಂದಿಸದೆ ಒಬ್ಬಂಟಿಯಾಗಿಯೇ ಇರುತ್ತಿದ್ದರು ಎಂದು ವರದಿಯಾಗಿದೆ. 

ಶಿವಮೊಗ್ಗ, ಸಾಗರ, ಶಿರಸಿ ಸೇರಿ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಕೆ ದರ ಪಟ್ಟಿ ಇಲ್ಲಿದೆ

ನಿನ್ನೆ ಬೆಳಿಗ್ಗೆಯಿಂದ ಸಂಜೆಯವರೆಗೂ ವಿನಯ್ ಕೋಣೆಯಿಂದ ಹೊರಬಾರದಿರುವುದನ್ನು ಗಮನಿಸಿದ ಪೋಷಕರಿಗೆ ಅನುಮಾನ ಮೂಡಿದೆ. ತಕ್ಷಣ ಕೋಣೆಯೊಳಗೆ ಹೋಗಿ ನೋಡಿದಾಗ ವಿನಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ

ಘಟನೆಗೆ ಸಂಬಂಧಿಸಿದಂತೆ ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Anandapura 27-Year-Old Vinay Dies

Anandapura 27-Year-Old Vinay Dies
Anandapura 27-Year-Old Vinay Dies
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.