ಪತ್ರಕರ್ತರಿಗೆ ಪ್ರತ್ಯೇಕ ನಿಧಿ | ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಮಹಾಸಭೆ!

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಮಹಾಸಭೆ, Annual General Meeting of Shimoga District Working Journalist Association!

ಪತ್ರಕರ್ತರಿಗೆ ಪ್ರತ್ಯೇಕ ನಿಧಿ | ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಮಹಾಸಭೆ!

KARNATAKA NEWS/ ONLINE / Malenadu today/ Oct 30, 2023 SHIVAMOGGA NEWS

SHIVAMOGGA |  ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಪ್ರೆಸ್‌ ಟ್ರಸ್ಟ್‌ನ ಪತ್ರಿಕಾಭವನದಲ್ಲಿ  (shivamogga press trust) ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಟಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ ಹೆಜ್ಜೆ ಇಟ್ಟಿದೆ. ಸಂಘದಿಂದ ಈಗಾಗಲೇ ನಡೆದಿರುವ ಕಾರ್ಯಗಳಿಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ತಿಳಿಸಿದರು.

READ : ಇಸ್ರೇಲ್​ನಿಂದ ಮಧು ಬಂಗಾರಪ್ಪರಿಗೆ ವಿಡಿಯೋ ಕಾಲ್ | ಶಿವಮೊಗ್ಗದ ವ್ಯಕ್ತಿಗೆ ಸಚಿವರ ಸಹಾಯ!



ಪತ್ರಕರ್ತರ ಸಂಘ: ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಸಮಾಜದ ಬೇರೆ, ಬೇರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಇಂತಹ ಹೊಸ ದಿಕ್ಕಿನಲ್ಲಿ ಆಲೋಚನೆ ಮಾಡಬೇಕಿದೆ. ಸಂಘ ಎಂದ ಮೇಲೆ ನ ವಿಭಿನ್ನ ಅಭಿಪ್ರಾಯಗಳಿರುತ್ತವೆ. ಇಲ್ಲಿ ಸಣ್ಣ ವ್ಯತ್ಯಾಸಗಳು ಸಹಜ ನಮ್ಮೊಳಗಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ನಾಲ್ಕು ಗೋಡೆಗಳ ಚೌಕಟ್ಟಿನಲ್ಲಿ ಬಗೆಹರಿಸಿಕೊಂಡು ಒಗ್ಗೂಡಿ ಎಲ್ಲರೂ ಮುನ್ನಡೆಯಬೇಕಿದೆ ಎಂದು ಹೇಳಿದರು.  

ಪತ್ರಕರ್ತರಿಗೆ ಪ್ರತ್ಯೇಕ ನಿಧಿ

ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಒಡಗೂಡಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ಪ್ರತ್ಯೇಕ ನಿಧಿ ಸ್ಥಾಪನೆ ಮಾಡುವ ಉದ್ದೇಶ ಹೊಂದಲಾಗಿದೆ, ಇದಕ್ಕೆ ಕೆಲ ಗಣ್ಯರು ಒತ್ತಾಸೆಯಾಗಿ ನಿಲ್ಲುವುದಾಗಿ ಹೇಳಿದ್ದಾರೆ. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕಿದೆ ಎಂದರು. ಸಂಘವು ಈವರೆಗೆ ಆನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಇದಕ್ಕಾಗಿ ಬೇರೆಯವರ ಬಳಿ ಕೈ ಚಾಚಬಾರದು ಎಂಬುದು ಸಂಘದ ನಿಲುವಾಗಿದ್ದು, ಸಂಘದ ಇತಿಮಿತಿಯಲ್ಲೇ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಕಾರ್ಯಕ್ರಮಗಳಿಗೆ ವಿವಿಧ ಸಂಘ-ಸಂಸ್ಥೆಗಳು ಕೈ ಜೋಡಿಸಿವೆ. ಕೆಲ ದಾನಿಗಳು ನಮಗೆ ಸಹಕಾರ ನೀಡಿದ್ದಾರೆ. ಜೊತೆಗೆ ಪದಾಧಿಕಾರಿಗಳಿಂದಲೂ ಹಣ ಸಂಗ್ರಹ ಮಾಡಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ವಿವರಿಸಿದರು.

ಸಂಘದ 2022ನೇ -23ನೇ ಸಾಲಿನ ವಾರ್ಷಿಕ ವರದಿ ವಾಚಿಸಿದ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಸಂಘದ ಉದ್ಘಾಟನೆ ಜೊತೆಗೆ ನಿರ್ಮಲ ಅಭಿಯಾನ ಮಾದಕ ವಸ್ತು ನಿರ್ಮೂಲನೆ ನಡೆಸಲಾಯಿತು. ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ನಾಟಕೋತ್ಸವ ನಡೆಯಿತು. ಗ್ರಾಮ ಭೇಟಿ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಲಾಯಿತು. ಈ ಎಲ್ಲ ಕಾರ್ಯಕ್ರಮಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತಕ್ತವಾಗಿದೆ. ಮುಂದೆ ಇದೇ ಸಮಾಜಮುಖ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಅವುಗಳ ಈಡೇರಿಕೆಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು. ಸಭೆ ಆರಂಭದಲ್ಲಿ ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ನಿರ್ದೇಶಕ ವಿವೇಕ್ ಮಹಾಲೆ ವಾರ್ಷಿಕ ಸಭೆಯ ನೊಟೀಸ್ ಓದಿ ದಾಖಲಿಸಿದರು. ನಿರ್ದೇಶಕ ಯೋಗೇಶ್, ಲೆಕ್ಕಪತ ಮಂಡಿಸಿದರು. ಉಪಾಧ್ಯಕ್ಷ ಹುಲಿಮನೆ ತಿಮ್ಮಪ್ಪ ಸ್ವಾಗತಿಸಿದರು. ಸಂತೋಷ್ ಕಾಚಿನಕಟ್ಟೆ ವಂದಿಸಿದರು. ನಿರ್ದೇಶಕ ರಾಮಚಂದ್ರ ಗುಣಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಖಜಾಚಿ ಶಿವಮೊಗ್ಗ ನಂದನ, ಸೇರಿದಂತೆ ನಿರ್ದೇಶಕರು, ಕಾರ್ಯಕಾರಣ ಸಮಿತಿ ಸದಸ್ಯರು ಉಪಸ್ಥಿತರಿದ್ದರು.



ಪ್ರತಿಭಾ ಪುರಸ್ಕಾರ 

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಬಳಿಕ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಹಯೋಗದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಮಾತನಾಡಿ, ಸಜ್ಜನ ಪತ್ರಕರ್ತರನ್ನು ಒಂದೆಡೆ ಸೇರಿಸಬೇಕು ಎಂಬ ಉದ್ದೇಶದಿಂದ ಈ ಸಂಘ ರಚನೆಯಾಗಿದೆ. ಸಂಘ ಯಾರೊಬ್ಬರ ಸ್ವತ್ತಲ್ಲ, ಎಲ್ಲರೂ ಸಂಘದ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಘದ ಸಂಘಟನೆಗೆ ಬಲ ನೀಡಬೇಕಿದೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕೇವಲ ಪತ್ರಕರ್ತರಿಗೆ ಕ್ಷೇಮಾಭಿವೃದ್ಧಿಗೆ ಮಾತ್ರ ಸೀಮಿತವಾಗಿಲ್ಲ, ಪತ್ರಿಕಾ ವಿತರಕರಿಗೂ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ಈ ಎರಡೂ ಸಂಘಟನೆಗಳು ಶ್ರಮಿಸುತ್ತಿವೆ ಎಂದು ತಿಳಿಸಿದರು. ಸಂಘದ ಸದಸ್ಯರ ಮಕ್ಕಳಾದ ವೈ.ಎಸ್.ಅನಿಕೇತನ್, ಅಚಲ ದತ್, ದೀಪಿಕಾ ಜಿ ಸ್ವಾಮಿ, ನಮತಾ, ತಪಸ್ಯ ಆರ್.ಭಟ್, ಸಾನಿಯಾ ಎಸ್.ಜುಬೇರ್ ಪಾಷ, ಬಿ.ಸಿಂಚನ, ಜೋಸಿನ್ ಹೆಲೆನ್‌ ಟೆಲಿಸ್, ಯೋಗರಾಜ್ ವಿವೇಕ್​ ಮಹಾಲೆ, ಸಿ.ಜಿ.ಐಶ್ವರ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.