ಶಿವಮೊಗ್ಗದಲ್ಲಿ ಮತ್ತೊಂದು ಮೀಸಲಾತಿ ಹೋರಾಟ/ 2ಎ ಮೀಸಲಾತಿಗಾಗಿ ಕ್ಷತ್ರಿಯ ಮರಾಠರ ಆಗ್ರಹ
ಶಿವಮೊಗ್ಗ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿ ತಮ್ಮ ಒತ್ತಾಯವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಸರ್ಕಾರಕ್ಕೆ ಸಲ್ಲಿಸಿದ್ರು.
ಪ್ರವರ್ಗ 3(ಬಿ) ಇಂದ ಪ್ರವರ್ಗ 2(ಎ) ಗೆ ಕ್ಷತ್ರಿಯ ಮರಾಠ ಸಮುದಾಯವನ್ನು ಸೇರ್ಪಡೆಗೊಳಿಸಬೇಕು ಎಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ರಾಜ್ಯ ಸರ್ಕಾರದ ಮುಂದೆ ಬೇಡಿಕೆಯನ್ನು ಇಟ್ಟಿದೆ. ಈ ಸಂಬಂಧ ಇವತ್ತು ಶಿವಮೊಗ್ಗ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿ ತಮ್ಮ ಒತ್ತಾಯವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಸರ್ಕಾರಕ್ಕೆ ಸಲ್ಲಿಸಿದ್ರು.
ಇದನ್ನು ಸಹ ಒದಿ : ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್ ಆರೋಪವೇನು
ರಾಜ್ಯದಲ್ಲಿ ಸುಮಾರು 40 ಲಕ್ಷ ಮರಾಠ ಜನಾಂಗದ್ದಾರೆ. ಆದರೆ ಈ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಇನ್ನೂ ಮರಾಠ ಸಮುದಾಯದಲ್ಲಿ ಸುಮಾರು 33 ಪಂಗಡಗಳಿವೆ. ಆ ಪೈಕಿ 27 ಪಂಗಡಗಳನ್ನು ಈಗಾಗಲೆ ಪ್ರವರ್ಗ 2(ಎ)ಗೆ ಸೇರ್ಪಡೆಯಾಗಿದೆ. ಆದರೆ, ಕ್ಷತ್ರಿಯ ಮರಾಠ ಜನಾಂಗವನ್ನು ಸೇರಿಸಿಲ್ಲ. ಹೀಗಾಗಿ ಕ್ಷತ್ರಿಯ ಮರಾಠಾ ಜನಾಂಗದ ಸಮಸ್ಯೆಯನ್ನು ಬಗೆಹರಿಸಿ ಈ ಜನಾಂಗವನ್ನು 2(ಎ) ಪ್ರವರ್ಗಕ್ಕೆ ಈಗಲಾದರೂ ಸೇರಿಸಬೇಕು ಎಂದ ಒತ್ತಾಯಿಸಿದ್ಧಾರೆ.
ಸಾರ್ವಜನಿಕರ ಗಮನಕ್ಕೆ | 14 ನೇ ತಾರೀಖು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಪವರ್ ಕಟ್
ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್ ಗ್ರೂಪ್ನ ಲಿಂಕ್ಗೆ ಕ್ಲಿಕ್ ಮಾಡಿ : Whatsapp