ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

KARNATAKA|  Dec 9, 2023 | ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ ಡಾ| ಬಿ.ಆರ್.ಅಂಬೇಡ್ಕರ್/ ಮಾಸ್ತಿ ವೆಂಕಟೇಶ ಆಯ್ಯಂಗಾರ್/ ಸಂಗೊಳ್ಳಿ ರಾಯಣ್ಣ ಕವಿ ರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು / ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ 

 ಪ್ರವೇಶ ಪರೀಕ್ಷೆ ಮತ್ತು ದಾಖಲಾತಿಯ ಮಾರ್ಗಸೂಚಿಗಳು

1. ಅಭ್ಯರ್ಥಿಯು ರಾಜ್ಯದಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಯಾವುದೇ ವಸತಿ ಶಾಲೆ /ಕಾಲೇಜಿನಿಂದ ಅರ್ಜಿಯನ್ನು ಸಲ್ಲಿಸತಕ್ಕದ್ದು.

2. ಅಭ್ಯರ್ಥಿಯು ಮೊದಲು ತನ್ನ SATS ಸಂಖ್ಯೆಯನ್ನು ತಾನು ಓದುತ್ತಿರುವ ಶಾಲೆಯಿಂದ ಪಡೆದು ನಂತರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಯಾವುದೇ ವಸತಿ ಶಾಲೆಯ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು.

3. ವೆಬ್​ಸೈಟ್​ :  http://kea.kar.nic.in  https://kreis.karnataka.gov.in ಆಯ್ಕೆ ಮಾಡಿಕೊಳ್ಳಬೇಕು.

4. ಅಭ್ಯರ್ಥಿಯ ತನ್ನ SATS ಸಂಖ್ಯೆಯನ್ನು ನಮೂದಿಸಬೇಕು. ನಂತರ ತನ್ನ ಎಲ್ಲಾ ವಿವರಗಳನ್ನು ಕಂಪ್ಯೂಟರ್ ಪರದೆಯ ಮೇಲೆ ನೋಡಲು ಅವಕಾಶವಿರುತ್ತದೆ.

5. ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ ಇತ್ಯಾದಿಗಳನ್ನು ನೋಡಬಹುದು, ಇವುಗಳಲ್ಲಿ ಏನಾದರೂ ವ್ಯತ್ಯಾಸವಿದ್ದಲ್ಲಿ ತಿದ್ದುಪಡಿ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಲು ಸೂಚಿಸಿದೆ.

6. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಲ್ಲಿಸತಕ್ಕದ್ದು, ಇಲ್ಲದಿದ್ದಲ್ಲಿ ಅಭ್ಯರ್ಥಿಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿ ಎಂದು ಪರಿಗಣಿಸಲಾಗುವುದು.

7. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆ ಮತ್ತು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸಬೇಕಾಗಿರುವುದರಿಂದ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.

8. ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಪಡೆದ ಮೂಲ ದಾಖಲೆಗಳನ್ನು ಅರ್ಜಿ ಸಲ್ಲಿಸುವ ಸಮಯದಲ್ಲಿ ಶಾಲೆಯ ಪ್ರಿನ್ಸಿಪಾಲರಿಗೆ ತೋರಿಸಬೇಕು ಮತ್ತು ಅವುಗಳ ಒಂದು ನಕಲು ಪ್ರತಿಯನ್ನು ಸಲ್ಲಿಸಬೇಕು.

9. ವಸತಿ ಶಾಲೆಗಳ ಆಯ್ಕೆಯನ್ನು ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು-ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಆದುದರಿಂದ ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದ್ದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerised Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

ಪೋಷಕರ ಗಮನಕ್ಕೆ: 

ಅಭ್ಯರ್ಥಿಗಳ ಪೋಷಕರು ತಮ್ಮ ತಾಲ್ಲೂಕು/ ಜಿಲ್ಲೆಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಶಾಲೆಗಳ ವಿವರಗಳನ್ನು ಪಡೆದುಕೊಂಡು, ತಮ್ಮ ಮಿಸಲಾತಿಗೆ ಸೀಟುಗಳ ಲಭ್ಯತೆಯನ್ನು ಪರಿಗಣಿಸಿ ಮಕ್ಕಳನ್ನು ಯಾವ ಶಾಲೆಗೆ ಸೇರಿಸಬೇಕು ಎಂಬುದನ್ನು ತೀರ್ಮಾನಿಸಿ, ಆಧ್ಯತಾ ಕ್ರಮದಲ್ಲಿ ನಮೂದಿಸಬೇಕು. ಆದ್ದರಿಂದ ಶಾಲೆಗಳನ್ನು ದಾಖಲಿಸುವ ಮೊದಲು ಒಂದು ಹಾಳೆಯಲ್ಲಿ ಬರೆದುಕೊಂಡು ವಿಚಾರ ಮಾಡಿ ನಂತರ ನಮೂದಿಸುವುದು ಸೂಕ್ತ. ಅರ್ಜಿ ಸಲ್ಲಿಸಿದ ನಂತರ ಪೋಷಕರು ತಮ್ಮ ಮಗುವಿನ ಎಲ್ಲಾ ವಿವರಗಳು ಸರಿಯಾಗಿ ನಮೂದಾಗಿರುವ ಬಗ್ಗೆ ಖಚಿತ ಪಡಿಸಿಕೊಂಡು ಸ್ವಿಕೃತಿಯನ್ನು ವಸತಿ ಶಾಲೆ/ಕಾಲೇಜು ಪ್ರಾಂಶುಪಾಲರಿಂದ ಪಡೆಯತಕ್ಕದ್ದು.ಯಾವುದೇ ಕಾರಣಕ್ಕೂ ತಿದ್ದುಪಡಿ ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗುವುದಿಲ್ಲ.

Shivamogga Malenadu Today

Shivamogga Malenadu Today

Shivamogga Malenadu Today


 

Leave a Comment