ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಆರಗ ಜ್ಞಾನೇಂದ್ರ! ಲೋಕಸಭೆ ಚುನಾವಣೆಯೊಳಗೆ ಏನಾಗುತ್ತೆ
Araga Jnanendra said that Siddaramaiah's government will not survive the Lok Sabha electionsಲೋಕಸಭೆ ಚುನಾವಣೆಯೊಳಗೆ ಸಿದ್ದರಾಮಯ್ಯರ ಸರ್ಕಾರ ಉಳಿಯುವುದಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ
KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಜನರಿಗೆ ಕುಡಿಯಲು ನೀರಿಲ್ಲದ ಸಂಕಷ್ಟದ ಸಂದರ್ಭದಲ್ಲಿ ಯಥೇಚ್ಛ ಹೆಂಡದ ಅಂಗಡಿಗಳನ್ನು ತೆರೆಯುವ ಮೂಲಕ ಜನರಿಗೆ ಮದ್ಯ ಕುಡಿಸಲು ರಾಜ್ಯ ಸರ್ಕಾರ ಹೊರಟಿದೆ.
ಈ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆವರೆಗೆ ಉಳಿಯುವ ಸಾಧ್ಯತೆಯೂ ಇಲ್ಲ ಎಂದಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಮಾತನಾಡ್ತಿದ್ದ ಅವರು, ರಾಜ್ಯದ ಜನತೆಗೆ ಸಮರ್ಥ ಆಡಳಿತವನ್ನು ನೀಡಲು ವಿಫಲವಾಗಿರುವ ಸರ್ಕಾರ, 3 ಸಾವಿರ ಜನರಿಗೆ ಒಂದರಂತೆ ಮದ್ಯದ ಅಂಗಡಿಗಳನ್ನು ತೆರೆಯಲು ಹೊರಟಿದೆ.
ಮಹಿಳೆಯರಿಗೆ 2 ಸಾವಿರ ರೂ. ನೀಡಿ, ಗಂಡಸರಿಂದ 5 ಸಾವಿರ ರೂ. ವಸೂಲಿ ಮಾಡುವ ಹತಾಶ ಯತ್ನವಾಗಿದೆ ಎಂದು ಲೇವಡಿ ಮಾಡಿದರು.
ಇನ್ನಷ್ಟು ಸುದ್ದಿಗಳು
-
ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ
-
ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬೆಂಗಳೂರಿಗೆ ಹೋಗುತ್ತಿದ್ದಾಗ ಶಾಕ್! ಸೂಡೂರು ಸಮೀಪ ಆಕ್ಸಿಡೆಂಟ್!