ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಬಾಲಕ ರಾಮನನ್ನ ಕೆತ್ತಿದ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್! ಎಲ್ಲೆಲ್ಲಿ ಕಾರ್ಯಕ್ರಮ!?
Arun Yogiraj of Mysuru, the sculptor who carved the Ramalalla will come to Shivamogga tomorrow. Where is the program!?
Shivamogga Apr 3, 2024 ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಅಯೋಧ್ಯೆ ಶ್ರೀರಾಮಮಂದಿರದ ಬಾಲಕ ರಾಮನ ಪ್ರತಿಮೆಯನ್ನ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್. ಹೌದು, ಅವರಿಗೆ ಶಿವಮೊಗ್ಗದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ವಿಶ್ವಕರ್ಮ, ವಿಶ್ವ ಬ್ರಾಹ್ಮಣ, ಕಾಳಿಕಾ ಪರಮೇಶ್ವರಿ ದೇವಸ್ಥಾನ ಸೇವಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ನಾಳೆ ಅಂದರೆ ಏಪ್ರಿಲ್ 7ರಂದು ಬೆಳಿಗ್ಗೆ 11ಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿವೆ
ಇನ್ನೊಂದೆಡೆ ಡ್ರೈಸ್ಲೈನ್ ಸಂಸ್ಥೆ ಹಾಗೂ ವಿಶ್ವಕರ್ಮ ಯಕ್ಷಾಭಿಮಾನ ವೇದಿಕೆ ದುರ್ಗಿಗುಡಿ ಇವರಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಂಜೆ ನಾಲ್ಕು ಗಂಟೆಗೆ ಅರುಣ್ ಯೋಗಿರಾಜ್ ರವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಭಾವಯಾನ ಸಂಗೀತ ಸಂಜೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅರುಣ್ಯೋಗೀರಾಜ್ ಸದ್ಯ ದೇಶದ ಬಹುಬೇಡಿಕೆಯ ಶಿಲ್ಪಿಯಾಗಿದ್ದಾರೆ. ಮೈಸೂರಿನಲ್ಲಿ 5 ತಲೆಮಾರಿನ ಪ್ರಸಿದ್ಧ ಶಿಲ್ಪಿಗಳ ಕೌಟುಂಬಿಕ ಹಿನ್ನಲೆ ಹೊಂದಿರುವ ಇವರು ದೇಶದಲ್ಲಿಯೇ ಹೆಸರಾಗಿದ್ದಾರೆ.
TODAY ವಾಟ್ಸ್ಯಾಪ್ ಚಾನಲ್ ಫಾಲೋ ಮಾಡಿ! ಯಾವಾಗ ಬೇಕೋ ಆಗಲೇ ಸುದ್ದಿ ಓದಿ, ಲಿಂಕ್ ಕ್ಲಿಕ್ ಮಾಡಿ
https://whatsapp.com/channel/0029Va9I91s3LdQVrdq7yl1h
ಇದನ್ನು ಓದಿ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನಲ್ಲೀಗ ಮಧು ಬಂಗಾರಪ್ಪನವರೇ ಸುಪ್ರೀಂ! ಶೀಘ್ರದಲ್ಲಿಯೇ ಇನ್ನೊಂದು ಬದಲಾವಣೆ! ಏನದು ರಾಜಕಾರಣ