ನಿರ್ಗತಿಕರಿಗೆ ಸಕಾಲದಲ್ಲಿ ನಿವೇಶನ ಮಂಜೂರು ಮಾಡದೆ ಹೋದರೆ ವಿಧಾನಸಭೆ ಚುನಾವಣೆ ಬಹಿಷ್ಕಾರ!

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾನವ ಹಕ್ಕುಗಳ ಹೋರಾಟ ಸಮಿತಿ ಮುಖಂಡರು,ಭದ್ರಾವತಿ ಕ್ಷೇತ್ರದ ಬಿಳಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಲೆ ಬಸಾಪುರ ಗ್ರಾಮದಲ್ಲಿ ಗ್ರಾಮ ಠಾಣಾ ಸರ್ವೆ ನಂಬರ್ 999 ರಲ್ಲಿ ಐದು ಎಕರೆ 18 ಗುಂಟೆ ಜಮೀನು ಖಾಲಿಯಿದ್ದು, ಈ ಜಾಗವನ್ನು ಬಡವರ ನಿವೇಶನಕ್ಕೆ ನೀಡಬೇಕೆಂದು 25 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ.

READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್

ಈ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿತೊಂಡು ಬಾಡಿಗೆ ಮನೆಯಲ್ಲಿ ವಾಸಿಸುವವರ ಸಂಖ್ಯೆ ಹೆಚ್ಚಿದೆ. ಮಳೆಗಾಲದಲ್ಲಿ ಸೂರುಗಳು ಸೋರುತ್ತಿವೆ. .ಇಲ್ಲಿನ ಬಡವರು ನಿವೇಶನಕ್ಕಾಗಿ ಹಲವಾರು ಬಾರಿ ಹೋರಾಟ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿವೇಶನ ನೀಡಬೇಕೆಂದು ತೀರ್ಮಾನವಾಗಿದ್ದರೂ, ಶ್ರೀಮಂತರಿಗೂ ನಿವೇಶನ ಮಂಜೂರು ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಆರೋಪಿಸಿದೆ.

ಫಲಾನುಭಾವಿಗಳನ್ನು ಗುರುತಿಸದೆ ನಾಲ್ಕೈದು ಗ್ರಾಮ ಸಭೆ ಗಳನ್ನು ಮುಂದೂಡುತ್ತಾ ಬರಲಾಗಿದೆ.ಇದು ಬಡವರಿಗೆ ದಕ್ಕಬೇಕಾದ ಮೂಲಭೂತ ಸೌಕರ್ಯದ ಮಾನವ ಹಕ್ಕಿನ ಉಲ್ಲಂಘನೆಯಾಗಿದೆ.ನಿವೇಶನ ವಂಚಿತ ಗ್ರಾಮಸ್ಥರು ಈ ಬಾರಿ ಚುನಾವಣೆ ಬಹಿಷ್ಕಾರ ಮಾಡಲಿದ್ದು,ಪ್ರತಿಭಟನೆ ನಡೆಸಲಾಗುವುದು ಎಂದು ಮಾನವ ಹೋರಾಟ ಸಮಿತಿ ಎಚ್ಚರಿಸಿದೆ.

READ | Shivamogga Crime News | ಹೋರಿ ಹಬ್ಬದ ವಿಚಾರಕ್ಕೆ ಪರ ಊರಿನಲ್ಲಿ ಜಗಳ, ಸ್ವಂತಊರಿನಲ್ಲಿ ಹೊಡೆದಾಟ! | ಪತ್ನಿ ಸಹಿ ನಕಲಿ ಮಾಡಿದ ಪತಿ | ಶಿವಮೊಗ್ಗದ ಕ್ರೈಂ ವರದಿಗಳು

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor