ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ! ಡಿಪ್ಲೋಮೋ ಕೋರ್ಸ್​ಗಳಿಗೆ ಅರ್ಜಿ ಆಹ್ವಾನ

Attention of students and parents! Applications invited for diploma courses

ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ! ಡಿಪ್ಲೋಮೋ ಕೋರ್ಸ್​ಗಳಿಗೆ ಅರ್ಜಿ ಆಹ್ವಾನ

KARNATAKA NEWS/ ONLINE / Malenadu today/ May 11, 2023 GOOGLE NEWS  

ಶಿವಮೊಗ್ಗ/  2023-24 ನೇ ಸಾಲಿನಲ್ಲಿ ಶಿರಾಳಕೊಪ್ಪದ ಶಿವಶರಣೆ ಅಕ್ಕಮಹಾದೇವಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್  ಸಂಸ್ಥೆಯಲ್ಲಿರುವ ಪ್ರಥಮ ಡಿಪ್ಲೋಮೊ ಕೋರ್ಸ್‍ಗಳಿಗೆ ಮೇರೆಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

 

 ಎಸ್‍ಎಸ್‍ಎಲ್‍ಸಿ  ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ  ಮೀಸಲಾತಿಯ ಪೂರಕ ದಾಖಲಾತಿಗಳೊಂದಿಗೆ ಮೇ -31 ರೊಳಗಾಗಿ ಸಂಸ್ಥೆಗೆ ನೇರವಾಗಿ ಸಲ್ಲಿಸಿ ಪ್ರವೇಶವನ್ನು ಪಡೆಯುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು  ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480057999/9481066050/8867419851 ಗಳನ್ನು ಸಂಪರ್ಕಿಸುವುದು

-----------------------

ಚೋರಡಿಯಲ್ಲಿ ಭೀಕರ ಅಪಘಾತ/ ಇಷ್ಟಕ್ಕೂ ಹೇಗಾಯ್ತು ಆಕ್ಸಿಡೆಂಟ್ ? ಪ್ರತ್ಯಕ್ಷದರ್ಶಿ ಹೇಳಿದ್ದೇನು

 

ಶಿವಮೊಗ್ಗ/  ಕಾಣೆಯಾದವರ ಬಗ್ಗೆ ವಿವರ; ಮಾಹಿತಿ ನೀಡಲು ಮನವಿ

 

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30 ವರ್ಷ) ಎಂಬ ಮಹಿಳೆಯು ಕಾಣೆಯಾಗಿದ್ಧಾರೆ. 

 

ತಮ್ಮ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ದಿ: 11/04/2023 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. 

 

ಚೋರಡಿ ಅಪಘಾತ/ಅಮ್ಮಾ ರಾಘಣ್ಣ ಮಾತಾಡ್ತಿದ್ದೀನಿ! / ದೇವರಾದ ಮೆಗ್ಗಾನ್ ಸಿಬ್ಬಂದಿ/ ಜೀವಕ್ಕೆ ಜೀವ ಕೊಟ್ಟ ಶಿವಮೊಗ್ಗ ಜನ! ಕುಮದ್ವತಿ ಸೇತುವೆ  ಮೇಲೆ ನಡೆದ ಘಟನೆಯ ಪೂರ್ತಿ ಚಿತ್ರಣ 

 

ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ.  ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. 

 

ಈ ತಾಯಿ ಮಕ್ಕಳ ಸುಳಿವು ದೊರತಲ್ಲಿ ಕೂಡಲೇ ಹೊಸನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.  (ಫೋಟೋಗಳನ್ನು ಲಗತ್ತಿಸಿದೆ)

 

Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

 

Malenadutoday.com Social media