satish jarkiholi :  ಕೇಂದ್ರ ಸರ್ಕಾರ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದೆ | ಸತೀಶ್ ಜಾರಕಿಹೊಳಿ

satish jarkiholi

satish jarkiholi : ಶಿವಮೊಗ್ಗ | ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿದ್ದು, ರಾಜಕೀಯವನ್ನು ಬದಿಗಿಟ್ಟು ಕೇಂದ್ರ ಸರ್ಕಾರಕ್ಕೆ  ನಾವು ಬೆಂಬಲ ಸೂಚಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಶಿವಮೊಗ್ಗದ ಐಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ  ನಡೆಯುತ್ತಿದ್ದು, ಸದ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.  ಕೇಂದ್ರ ಸರ್ಕಾರ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುತ್ತದೆ.  ನಾವು ಕೇಂದ್ರದ ನಿರ್ಧಾರಕ್ಕೆ  ರಾಜಕೀಯವನ್ನು ಬದಿಗಿಟ್ಟು ಬೆಂಬಲ ಸೂಚಿಸಿದ್ದೇವೆ ಎಂದರು. ಹಾಗೆಯೇ … Read more

shivamogga alert :  ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ ಪ್ರವೇಶ ನಿಷೇಧ | ಕಾರಣವೇನು

Railway technical inspectionpolice register a POCSO case against a 55-year-old man Cyber crimeostponed bsy case to september 2 Shivamogga District Court

shivamogga alert :  ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ ಪ್ರವೇಶ ನಿಷೇಧ | ಕಾರಣವೇನು ಶಿವಮೊಗ್ಗ:  ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್) ಕ್ಕೆ ಸಾರ್ವಜನಿಕ ಪ್ರವೇಶವನ್ನು ರಾತ್ರಿ 9:30 ರಿಂದ ಬೆಳಿಗ್ಗೆ 5:30 ವರೆಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್​ ಹೆಗಡೆ ತಿಳಿಸಿದ್ದಾರೆ. ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ … Read more

sigandur bridge : ಸಿಗಂದೂರು ಸೇತುವೆಯ ಕೊನೆ ಹಂತದ  ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಸಂಸದ ಬಿವೈ ಆರ್​ | ಹೇಳಿದ್ದೇನು

Game Changer Shivamoggasigandur bridge

sigandur bridge : ಸಂಸದ ಬಿವೈ ರಾಘವೇಂದ್ರರವರು ಇಂದು ಸಿಗಂದೂರು ಸೇತುವೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೇತುವೆಯ ಕೊನೆ ಹಂತದ ನಿರ್ಮಾಣ ಕಾಮಗಾರಿಯ ವೀಕ್ಷಣೆಯನ್ನು ಮಾಡಿದರು. sigandur bridge : ಬಿವೈ ರಾಘವೇಂದ್ರ ಹೇಳಿದ್ದೇನು ಈ ವೇಳೆ ಮಾತಣಾಡಿದ ಅವರು ಕಳಸವಳ್ಳಿ – ಅಂಬಾರಗೋಡ್ಲು ಮಧ್ಯೆ ಸೇತುವೆ ಆಗಬೇಕು ಎಂಬುದು ಬಹು ವರ್ಷದ ಕನಸಾಗಿತ್ತು. ಈ ಸೇತುವೆ ನಿರ್ಮಾಣಕ್ಕಾಗಿ ಜನರು ಅನೇಕ ವರ್ಷ ಹೋರಾಟ ನಡೆಸಿದ್ದರು. ಹಾಗಾಗಿ ಗ್ರಾಮ ಪಂಚಾಯಿತಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಯಿತು. ಸಾಗರ … Read more

shivamogga news : ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳಿಗೆ 4 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ 

Online frauds

shivamogga news : ಶಿವಮೊಗ್ಗ : ಅಕ್ರಮವಾಗಿ ದ್ವಿಚಕ್ರ ವಾಹನದಲ್ಲಿ  ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅಪರಾಧಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ತೀರ್ಪು ನೀಡಿ ಆದೇಶಿಸಿದೆ. shivamogga news : ಏನಿದು ಪ್ರಕರಣ ಜುಲೈ 07- 2021 ರಂದು ಲಕ್ಕಿನಕೊಪ್ಪ ಕಡೆಗೆ ಬರುವ ಸಾರ್ವಜನಿಕ ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ನಲ್ಲಿ  ಅಕ್ರಮವಾಗಿ ಆರೋಪಿಗಳು ಗಾಂಜಾವನ್ನು … Read more

auto rickshaw :  ಆಟೋರಿಕ್ಷಾ ಪ್ರೀ ಪೇಯ್ಡ್ ಕೌಂಟರ್ ತೆರೆಯಲು ಅರ್ಜಿ ಆಹ್ವಾನ

auto rickshaw

auto rickshaw :  ಆಟೋರಿಕ್ಷಾ ಪ್ರೀ ಪೇಯ್ಡ್ ಕೌಂಟರ್ ತೆರೆಯಲು ಅರ್ಜಿ ಆಹ್ವಾನ  ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಶಿವಮೊಗ್ಗ ನಗರದ ರೈಲ್ವೇ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ ನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  

sharavathi valley : ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಹೈ ಅಲರ್ಟ್ | ​ ಕಾರಣವೇನು

sharavathi valley

sharavathi valley : ಭಾರತ ಪಾಕಿಸ್ತಾನದ ವಿರುದ್ದ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ದಾಳಿ ನಡೆಸುತ್ತಿದ್ದ್ದು, ಇದೀಗ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನಲೆ  ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಕರ್ನಾಟಕ ವಿದ್ಯುತ್‌ ನಿಗಮದ ಭದ್ರತಾ ವ್ಯವಸ್ಥೆಯನ್ನು ಹೈ ಅಲರ್ಟ್ ಮಾಡಲಾಗಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಮಾಂಡೊ ತರಬೇತಿ ಪಡೆದ ಅನುಭವಿ ಸಿಬ್ಬಂದಿ ಭದ್ರತಾ ಕಾರ್ಯಪಡೆಯನ್ನು, ಲಿಂಗನಮಕ್ಕಿ ಅಣೆಕಟ್ಟು, ಲಿಂಗನಮಕ್ಕಿ ಜಲವಿದ್ಯುದಾಗಾರ, ಮಹಾತ್ಮ ಗಾಂಧಿ ಮತ್ತು ಶರಾವತಿ ಜಲವಿದ್ಯುತ್​ಗಾರಗಳಲ್ಲಿ ಕಾವಲಿಗಾಗಿ ನೇಮಿಸಲಾಗಿದೆ. sharavathi valley … Read more

rippon pete : ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ಆರೋಪ | ದೂರು ದಾಖಲು

rippon pete

rippon pete : ರಿಪ್ಪನ್​ಪೇಟೆ : ಕಳ್ಳನೊಬ್ಬ ಮನೆಯೊಂದಕ್ಕೆ ನುಗ್ಗಿ ವೃದ್ದರೊಬ್ಬರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ನಗದನ್ನು ಕಳ್ಳತನವೆಸಗಿದ ಘಟನೆ  ರಿಪ್ಪನ್​ ಪೇಟೆ ಪೊಲಿಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ರಿಪ್ಪನ್​ ಪೇಟೆ ಪೊಲೀಸರು ಬಂಧಿಸಿದ್ದಾರೆ.  rippon pete : ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ ನವೀನ ಬಂಧಿತ ಆರೋಪಿ.  ದೂನ ಗ್ರಾಮದ ನಿವಾಸಿ ಚನ್ನವೀರಪ್ಪ ಗೌಡ ಎಂಬುವವರ ಮನೆಗೆ  ಕಳೆದ ಮೇ 04 2025 ರಂದು  ನವೀನ್​ … Read more

theft case : ಮದುವೆಗೆ ಹೊರಡಲು ಸಿದ್ಧವಾದ ಮಹಿಳೆಗೆ ಶಾಕ್​ | ಲಕ್ಷಾಂತರ ಮೌಲ್ಯದ ಬಂಗಾರ ಕಳ್ಳತನ

elderly Woman Stabbed to Death in Kumsi Kumsi police station

theft case : ಶಿವಮೊಗ್ಗ :  ಶಿವಮೊಗ್ಗ ತಾಲ್ಲೂಕಿನ ರೇಚಿಕೊಪ್ಪದ ಸುರೇಶ್‌ ಎಂಬುವವರ ಮನೆಯಲ್ಲಿ ಪೆಟ್ಟಿಗೆಯಲ್ಲಿ ಇಟ್ಟಿದ್ದ 2 ಬಂಗಾರದ ಸರಗಳು ಕಳ್ಳತನವಾಗಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರೇಶ್‌ ಮತ್ತು ಅವರ ಪತ್ನಿ  ಏಪ್ರಿಲ್ 17 ರಂದು ಮಗಳ ಮನೆಗೆ ಸಮಾರಂಭಕ್ಕೆಂದು ತೆರಳಿದ್ದರು. ಸಮಾರಂಭದಿಂದ ಬಂದು ಸರವನ್ನು ತೆಗೆದು ಪೆಟ್ಟಿಗೆಯಲ್ಲಿ ಇಟ್ಟಿದ್ದರು. ನಂತರ  ಏಪ್ರಿಲ್ 24 ರಂದು ಮದುವೆಗೆ ಹೋಗಬೇಕೆಂದು ಸರವನ್ನು ಹಾಕಲು ಪೆಟ್ಟಿಗೆ ತೆಗೆದಾಗ 5 ಲಕ್ಷ ಮೌಲ್ಯದ 2  … Read more

mahendra singh dhoni :  ಸಾಕು ತಂಡ ಕಟ್ಟು, ನೀನು ಇನ್ನೆಷ್ಟು ದಿನ ಆಡ್ತಿಯಾ..?

mahendra singh dhoni :

mahendra singh dhoni : ವಯಸ್ಸು 44 ಆಯ್ತು.. ಇನ್ನೂ ಆಡಬೇಕು ಎಂದು ಮನಸ್ಸು ಹೇಳ್ತಾ ಇದೆ. ಆದ್ರೆ ದೇಹ ಸ್ಪಂದಿಸಬೇಕಲ್ವಾ..? ನೋಡೋಣ.. ಮುಂದಿನ ಏಳೆಂಟು ತಿಂಗಳಲ್ಲಿ ಏನೇನು ಆಗುತ್ತೆ ಅಂತ.. ಆಮೇಲೆ ನಿರ್ಧಾರ ತಗೊಂಡ್ರೆ ಆಯ್ತು.. ಅಂದ ಮೇಲೆ  ಧೋನಿ ಮುಂದಿನ ಐಪಿಎಲ್‌ನಲ್ಲೂ ಆಡುವುದು ಬಹುತೇಕ ಖಚಿತ. ನಿಜ, ಐಪಿಎಲ್​ ನಲ್ಲಿ ಮಹೇಂದ್ರ ಸಿಂಗ್ ಧೋನಿ ಪ್ರಶ್ನಾತೀತ ಆಟಗಾರ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿಯೇ ಜೀವಾಳ. ಧೋನಿ ಇಲ್ಲದಿದ್ರೆ ಸಿಎಸ್‌ಕೆ ತಂಡವನ್ನು ಊಹಿಸಿಕೊಳ್ಳುವುದು … Read more

bhadravathi police :  ನಕಲಿ ಬಂಗಾರ ತೋರಿಸಿ ಲಕ್ಷಾಂತರ ರೂಪಾಯಿ ವಂಚನೆ | ಆರೋಪಿ ಪೊಲೀಸರ ವಶಕ್ಕೆ

bhadravathi police

bhadravathi police : ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು  ಪೊಲೀಸರು ಬಂಧಿಸಿದ್ದಾರೆ. ರಾಮಪ್ಪ (65) ಬಂಧಿತ ಆರೋಪಿಯಾಗಿದ್ದಾರೆ.  bhadravathi police : ಏನಿದು ಪ್ರಕರಣ ವಿಜಯನಗರ ಜಿಲ್ಲೆಯ ರಾಜೇಶ್​ ಎಂಬುವವರಿಗೆ ಜುಲೈ 2024 ರಂದು ಆರೋಪಿ ರಾಮಪ್ಪ  ಸುರೇಶ್​ ಎಂಬ ಹೆಸರಿನಿಂದ ಪರಿಚಯಿಸಿಕೊಂಡಿದ್ದ. ನಂತರ  ಆತ ರಾಜೇಶ್​ಗೆ ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಹಿನ್ನಲೆ ರಾಜೇಶ್ ಹೊಳೆಹೊನ್ನೂರು … Read more