KARNATAKA NEWS/ ONLINE / Malenadu today/ Aug 24, 2023 SHIVAMOGGA NEWS
ಮಾಜಿ ವಿಧಾನ ಪರಿಷತ್ ಸದಸ್ಯ ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮೂಲಕ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್ ಇಂದು ಕೆಪಿಸಿಸಿ ಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಇನ್ನೂ ಇದೇ ವೇಳೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಬಂಡಾಯವೆದ್ದು ಬಿವೈ ವಿಜಯೇಂದ್ರರವರ ಎದುರು ಸ್ಪರ್ಧಿಸಿದ್ದ ನಾಗರಾಜ್ ಗೌಡ ಕೂಡ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಇದ್ದರು

ಪಕ್ಷ ಸೇರಿದ ಬಳಿಕ ಮಾತನಾಡಿದ ಆಯನೂರು ಮಂಜುನಾಥ್, ಕೆಪಿಸಿಸಿ ಅಧ್ಯಕ್ಷರು ನೀಡಿದ ಸಲಹೆಗಳನ್ನು ಪಾಲಿಸಿಸುತ್ತೇನೆ ಎಂದರು, ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೇಳಿದ ದಾರಿಯಲ್ಲಿ ಕೆಲಸ ಮಾಡುತ್ತೇನೆ ಎಂದ ಅವರು ನಾಯಕರ ನಾಯಕತ್ವದಲ್ಲಿ ಪಕ್ಷಕ್ಕೆ ಬರಮಾಡಿಕೊಂಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಇನ್ನೂ ಇದಕ್ಕೂ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯಾವುದೇ ಕಾರಣಕ್ಕೂ ಕಷ್ಟಗಾಲದಲ್ಲಿ ಪಕ್ಷದ ಕೈ ಹಿಡಿದವರನ್ನು ಬಿಡುವ ಪ್ರಶ್ನೆಯಿಲ್ಲ. ಸಮುದ್ರದ ನೀರು ಸಮುದ್ರಕ್ಕೆ ಸೇರಲೇ ಬೇಕು. ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಇಲ್ಲಿಂದ ಹೋದವರು ವಾಪಸ್ ಬರುತ್ತಾರೆ. ಹಾಗೆಂದು ಯಾರಿಗೂ ನಾವು ಯಾವುದೇ ಆಶ್ವಾಸನೆಯನ್ನು ನೀಡುವುದಿಲ್ಲ. ಅವರ ಶಕ್ತಿ, ಅವರ ಕೆಲಸ ಹಾಗೂ ಪಕ್ಷ ನಿಷ್ಟೆಯನ್ನು ನೋಡಿ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗುವುದು ಎಂದು ತಿಳಿಸಿದರು.
ಈ ಮಧ್ಯೆ ಸಮಾರಂಭದಲ್ಲಿ ಪಕ್ಷ ಸೇರಿದ ಆಯನೂರು ಮಂಜುನಾಥ್ರವರನ್ನು ಮಾತನಾಡಿಸಿದ ಸಚಿವ ಮಧು ಬಂಗಾರಪ್ಪನವರು, ನಿಮ್ಮದು ಘರ್ ವಾಪ್ಸಿ ಎಂದರು, ಇದಕ್ಕೆ ಆಯನೂರು ಮಂಜುನಾಥ್ರವರು ಮಧು ಬಂಗಾರಪ್ಪನವರಿಗೆ ಹಸ್ತಲಾಘವ ನೀಡಿದ್ರು. ಈ ವೇಳೆ ಶಾಸಕ ಬೇಳೂರು ಗೋಪಾಲಕೃಷ್ಣರವರು ಸಹ ಅಲ್ಲಿಯೇ ಉಪಸ್ಥಿತರಿದ್ದರು
ಇನ್ನಷ್ಟು ಸುದ್ದಿಗಳು
ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?ಉದ್ಯೋಗಕ್ಕಾಗಿ ಹುಡಕಾಡ್ತಿದ್ದೀರಾ?
ಇಲ್ಲಿದೆ ಅವಕಾಶ! ವಿದ್ಯಾರ್ಹತೆ ಎಸ್ಎಸ್ಎಲ್ಸಿ-ಪದವಿ! ಪೂರ್ತಿ ವಿವರ ಇಲ್ಲಿದೆ
ಶಿವಮೊಗ್ಗ ನಗರದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ಇರೋದಿಲ್ಲ ವಿದ್ಯುತ್! ಯಾವಾಗ? ಎಲ್ಲೆಲ್ಲಿ ? ವಿವರ ಇಲ್ಲಿದೆ