bear attack ತೋಟಕ್ಕೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ
ಭದ್ರಾವತಿ ತಾಲೂಕಿನ ಮಾವಿನಕೆರೆಯಲ್ಲಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಧುಸೂದನ್ (38) ದಾಳಿಗೊಳಗಾದ ವ್ಯಕ್ತಿ.
ಬಂಡಿಗುಡ್ಡದ ಮಾವಿನ ಕೆರೆಯ ಬಳಿ ಮಧುದೂದನ್ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕರಡಿ ಅವರ ಮೇಲೆ ಏಕಾ ಏಕಿ ದಾಳಿ ನಡೆಸಿದೆ. ಕೂಡಲೇ ಅವರನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
