bhadravathi accident : ಭದ್ರಾವತಿ ರಸ್ತೆಯ ನಿದಿಗೆ ಸಮೀಪದಲ್ಲಿ ಇಂದು ಬೆಳಿಗ್ಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿ ನಿಂತಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ ಡಸ್ಟರ್ ಕಾರು ಒಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿ ಮಣ್ಣಿನ ರಾಶಿಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮಣ್ಣಿನಲ್ಲಿದ್ದ ಕಲ್ಲು ಎದುರಿಗೆ ಬರುತ್ತಿದ್ದ ಲಾರಿಗೆ ತಾಗಿ ಲಾರಿಯ ಗ್ಲಾಸ್ ಒಡೆದು ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಇಬ್ಬರ ಅಪಘಾತದಿಂದ ಪಾರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
