Bhadravathi Old Town police station : ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೆಳಗ್ಗೆ ಮಾಯ! ಮಾಲೀಕನಿಗೆ ಶಾಕ್​

Bhadravathi Old Town police station  : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಲಾಗಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಇಲ್ಲಿನ  ಖಲಂದರ್ ನಗರದ ಅಬ್ದುಲ್ ರೆಹಮಾನ್ ಎಂಬುವರು ರಾತ್ರಿ ಮನೆಯ ಕಾಂಪೌಂಡ್‌ನಲ್ಲಿ ರಾಯಲ್ ಎನ್ ಫೀಲ್ಡ್ ಬೈಕನ್ನು ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡುವಾಗ  ಬೈಕ್ ಕಳುವಾಗಿರುವುದು ಗೊತ್ತಾಗಿದೆ. ಅಕ್ಕಪಕ್ಕ ವಿಚಾರಿಸಿದ ಅವರು, ಕೊನೆಗೆ ಅಂತಿಮವಾಗಿ ಓಲ್ಡ್​ ಟೌನ್​ ಪೊಲೀಸರಿಗೆ  ದೂರು ದಾಖಲಿಸಿ ಕೇಸ್ ಮಾಡಿಸಿದ್ದಾರೆ

ಆಕ್ಸಿಡೆಂಟ್​ನಲ್ಲಿ ವೃದ್ಧೇ ಸಾವು 

ಭದ್ರಾವತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದಾಗ ವೃದ್ಧೆಯೊಬ್ಬರು ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದರಿಂದ ಸಾವನ್ನಪ್ಪಿದ್ದಾರೆ.  ತಾಲೂಕಿನ ಭದ್ರಾವತಿ-ಚನ್ನಗಿರಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಅರಳಿಹಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಸಾಧಿಕ್‌ರವರ ಮುತ್ತಜ್ಜಿ ಸುಮಾರು 92 ವರ್ಷ ವಯೋಮಾನದ ಚಮನ್ ಬೀ ಸ್ಥಳದಲ್ಲಿಯೇ ಮೃತಪಟ್ಟಿದ್ಧಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರ್ಯಾಕ್ಟರ್ ಚಾಲಕ ನಾಗರಾಜ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು