ನವೆಂಬರ್ 11 2025 ಮಲೆನಾಡು ಟುಡೆ ಸುದ್ದಿ : ಇಂದು ವಿದ್ಯುತ್ ವ್ಯತ್ಯಯ ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗಗಳ ಘಟಕ-2ರ ಶಾಖಾ ವ್ಯಾಪ್ತಿಯ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಪಿಎಂಸಿಯಲ್ಲಿ ಎಷ್ಟಿದೆ ಅಡಿಕೆ ದರ!? ಯಾವ ಮಾರ್ಕೆಟ್ನಲ್ಲಿ ಹೇಗೆ ತಗೊತ್ತಿದ್ದಾರೆ ಅಡಕೆ

ಭದ್ರಾವತಿಯಲ್ಲಿ ಇವತ್ತು ಕರೆಂಟ್ ಇರಲ್ಲ/MESCOM Maintenance
ಹನುಮಂತನಗರ, ಕೆ.ಎಚ್.ಬಿ ಕಾಲೋನಿ, ಹೊಸಸೇತುವೆ ರಸ್ತೆ, ಕರ್ನಾಟಕ ರಸ್ತೆ ಸಾರಿಗೆ ನಿಗಮ ಘಟಕ ವ್ಯಾಪ್ತಿ, ಅಂಬೇಡ್ಕರ್ ನಗರ, ಹನುಮಂತಪ್ಪ ಕಾಲೋನಿ, ಸಂತೋಷ್ ಬಡಾವಣೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಇಂದು ವಿದ್ಯುತ್ ವ್ಯತ್ಯಯ
ಸಾಗರ: ನಗರದಲ್ಲಿ ಬಿ.ಎಚ್.ರಸ್ತೆ ವಿಸ್ತರಣೆ ಕಾಮಗಾರಿ ಹಿನ್ನೆಲೆಯಲ್ಲಿ ನ.11ರಂದು ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ನೆಹರು ನಗರ, ಅರಳೀಕೊಪ್ಪ, ಜನ್ನತ್ ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿ.ಎಚ್ ರಸ್ತೆ, ಅಶೋಕ ರಸ್ತೆ, ಕೃಷ್ಣಗ್ಯಾರೇಜ್, ಎಲ್ಐಸಿ ಆಫೀಸ್ ವ್ಯಾಪ್ತಿ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಅಸಭ್ಯ ನಡೆ! ಅಪಪ್ರಚಾರ! ಉಡುಪಿ ಜಿಲ್ಲೆಯ ದೂರು, ಶಿವಮೊಗ್ಗಕ್ಕೆವರ್ಗ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
